ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2023ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್ ಅಂತರದ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ಗೆ ಲಗ್ಗೆಯಿಟ್ಟಿದೆ.
ಈ ಮೂಲಕ ಗುಜರಾತ್ ಟೈಟನ್ಸ್ ಬಳಿಕ ಪ್ಲೇ ಆಫ್ಗೆ ಪ್ರವೇಶಿಸಿದ ಎರಡನೇ ತಂಡವೆನಿಸಿದೆ.
ಇದು ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ ಎಂದೇ ಅಂದಾಜಿಸಲಾಗಿದೆ. ಈಗ ಮಹಿ ನಾಯಕತ್ವದಲ್ಲಿ ಪ್ಲೇ ಆಫ್ಗೆ ಲಗ್ಗೆ ಇಟ್ಟಿರುವ ಸಿಎಸ್ಕೆ ಮಗದೊಂದು ಟ್ರೋಫಿ ಮೇಲೆ ಕಣ್ಣಿಟ್ಟಿದೆ.
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟಾಸ್ ಗೆದ್ದ ಚೆನ್ನೈ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್ಗಳ ಬೃಹತ್ ಮೊತ್ತ ದಾಖಲಿಸಿತು.
ಚೆನ್ನೈ ಪರ ಆರಂಭಿಕ ಬ್ಯಾಟರ್ಗಳಾದ ಡೆವೊನ್ ಕಾಸ್ಟೇ 52 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ಸಮೇತ 87 ರನ್ ಗಳಿಸಿದರು. ಋತುರಾಜ್ ಗಾಯಕವಾಡ್ 50 ಎಸೆತಗಳಲ್ಲಿ 7 ಸಿಕ್ಸರ್, 3 ಬೌಂಡರಿ ಸಹಿತ 79 ರನ್ ಗಳಿಸಿ ಮಿಂಚಿದರು.
ಇತ್ತ ಶಿವಂ ದುಬೆ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 22 ರನ್ ಗಳಿಸಿದರೆ, ರವೀಂದ್ರ ಜಡೇಜ 7 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಮೇತ 200 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಟೆ ಹಾಗೂ ಚೇತನ್ ಜಕಾರಿಯಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಚೆನ್ನೈ ನೀಡಿದ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಡೆಲ್ಲಿ ನಾಯಕ ಡೇವಿಡ್ ವಾರ್ನರ್ ಅರ್ಧಶತಕದ (86) ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಉಳಿದಂತೆ ಬೇರಾವ ಆಟಗಾರರಿಂದಲೂ ನಿರೀಕ್ಷಿತ ಜೊತೆಯಾಟ ಕಾಣಲಿಲ್ಲ.
ಸಿಎಸ್ಕೆ ಪರ ದೀಪಕ್ ಚಾಹರ್ ಮೂರು ವಿಕೆಟ್ ಗಳಿಸಿದರು.
ಪಂದ್ಯಶ್ರೇಷ್ಠ: ಋತುರಾಜ್ ಗಾಯಕ್ವಾಡ್
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…