ಕ್ರೀಡೆ

ಚೆನ್ನೈ ಸೂಪರ್​ ಕಿಂಗ್ಸ್​ಗೆ ಭರ್ಜರಿ ಜಯ: ಪ್ಲೇಆಫ್​ಗೆ ಎಂಟ್ರಿಕೊಟ್ಟ ಧೋನಿ ಬಾಯ್ಸ್

ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2023ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್ ಅಂತರದ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ.

ಈ ಮೂಲಕ ಗುಜರಾತ್ ಟೈಟನ್ಸ್ ಬಳಿಕ ಪ್ಲೇ ಆಫ್‌ಗೆ ಪ್ರವೇಶಿಸಿದ ಎರಡನೇ ತಂಡವೆನಿಸಿದೆ.

ಇದು ಮಹೇಂದ್ರ ಸಿಂಗ್‌ ಧೋನಿ ಅವರ ಕೊನೆಯ ಐಪಿಎಲ್ ಎಂದೇ ಅಂದಾಜಿಸಲಾಗಿದೆ. ಈಗ ಮಹಿ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿರುವ ಸಿಎಸ್‌ಕೆ ಮಗದೊಂದು ಟ್ರೋಫಿ ಮೇಲೆ ಕಣ್ಣಿಟ್ಟಿದೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟಾಸ್ ಗೆದ್ದ ಚೆನ್ನೈ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿತು.

ಚೆನ್ನೈ ಪರ ಆರಂಭಿಕ ಬ್ಯಾಟರ್‌ಗಳಾದ ಡೆವೊನ್‌ ಕಾಸ್ಟೇ 52 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ಸಮೇತ 87 ರನ್ ಗಳಿಸಿದರು. ಋತುರಾಜ್ ಗಾಯಕವಾಡ್ 50 ಎಸೆತಗಳಲ್ಲಿ 7 ಸಿಕ್ಸರ್, 3 ಬೌಂಡರಿ ಸಹಿತ 79 ರನ್ ಗಳಿಸಿ ಮಿಂಚಿದರು.

ಇತ್ತ ಶಿವಂ ದುಬೆ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 22 ರನ್ ಗಳಿಸಿದರೆ, ರವೀಂದ್ರ ಜಡೇಜ 7 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಮೇತ 200 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಟೆ ಹಾಗೂ ಚೇತನ್ ಜಕಾರಿಯಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಚೆನ್ನೈ ನೀಡಿದ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಡೆಲ್ಲಿ ನಾಯಕ ಡೇವಿಡ್ ವಾರ್ನರ್ ಅರ್ಧಶತಕದ (86) ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಉಳಿದಂತೆ ಬೇರಾವ ಆಟಗಾರರಿಂದಲೂ ನಿರೀಕ್ಷಿತ ಜೊತೆಯಾಟ ಕಾಣಲಿಲ್ಲ.

ಸಿಎಸ್‌ಕೆ ಪರ ದೀಪಕ್ ಚಾಹರ್ ಮೂರು ವಿಕೆಟ್ ಗಳಿಸಿದರು.

ಪಂದ್ಯಶ್ರೇಷ್ಠ: ಋತುರಾಜ್‌ ಗಾಯಕ್ವಾಡ್‌

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

6 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

7 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

14 hours ago