ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2023ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್ ಅಂತರದ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ಗೆ ಲಗ್ಗೆಯಿಟ್ಟಿದೆ.
ಈ ಮೂಲಕ ಗುಜರಾತ್ ಟೈಟನ್ಸ್ ಬಳಿಕ ಪ್ಲೇ ಆಫ್ಗೆ ಪ್ರವೇಶಿಸಿದ ಎರಡನೇ ತಂಡವೆನಿಸಿದೆ.
ಇದು ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ ಎಂದೇ ಅಂದಾಜಿಸಲಾಗಿದೆ. ಈಗ ಮಹಿ ನಾಯಕತ್ವದಲ್ಲಿ ಪ್ಲೇ ಆಫ್ಗೆ ಲಗ್ಗೆ ಇಟ್ಟಿರುವ ಸಿಎಸ್ಕೆ ಮಗದೊಂದು ಟ್ರೋಫಿ ಮೇಲೆ ಕಣ್ಣಿಟ್ಟಿದೆ.
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟಾಸ್ ಗೆದ್ದ ಚೆನ್ನೈ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್ಗಳ ಬೃಹತ್ ಮೊತ್ತ ದಾಖಲಿಸಿತು.
ಚೆನ್ನೈ ಪರ ಆರಂಭಿಕ ಬ್ಯಾಟರ್ಗಳಾದ ಡೆವೊನ್ ಕಾಸ್ಟೇ 52 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ಸಮೇತ 87 ರನ್ ಗಳಿಸಿದರು. ಋತುರಾಜ್ ಗಾಯಕವಾಡ್ 50 ಎಸೆತಗಳಲ್ಲಿ 7 ಸಿಕ್ಸರ್, 3 ಬೌಂಡರಿ ಸಹಿತ 79 ರನ್ ಗಳಿಸಿ ಮಿಂಚಿದರು.
ಇತ್ತ ಶಿವಂ ದುಬೆ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 22 ರನ್ ಗಳಿಸಿದರೆ, ರವೀಂದ್ರ ಜಡೇಜ 7 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಮೇತ 200 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಟೆ ಹಾಗೂ ಚೇತನ್ ಜಕಾರಿಯಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಚೆನ್ನೈ ನೀಡಿದ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಡೆಲ್ಲಿ ನಾಯಕ ಡೇವಿಡ್ ವಾರ್ನರ್ ಅರ್ಧಶತಕದ (86) ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಉಳಿದಂತೆ ಬೇರಾವ ಆಟಗಾರರಿಂದಲೂ ನಿರೀಕ್ಷಿತ ಜೊತೆಯಾಟ ಕಾಣಲಿಲ್ಲ.
ಸಿಎಸ್ಕೆ ಪರ ದೀಪಕ್ ಚಾಹರ್ ಮೂರು ವಿಕೆಟ್ ಗಳಿಸಿದರು.
ಪಂದ್ಯಶ್ರೇಷ್ಠ: ಋತುರಾಜ್ ಗಾಯಕ್ವಾಡ್
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…