ಕ್ರೀಡೆ

ಭಾರತ vs ಆಸ್ಟ್ರೇಲಿಯಾ ಕೊನೆಯ ಟೆಸ್ಟ್:‌ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಾಳೆಯಿಂದ (ಜನವರಿ 3) ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಮಹತ್ವದ ಬದಲಾವಣೆಯೊಂದಿಗೆ ಆಡುವ 11ರ ಬಳಗ ಪ್ರಕಟಿಸಿದೆ.

ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಅವರನ್ನು ಈ ಪಂದ್ಯದಿಂದ ಕೈಬಿಟ್ಟಿದ್ದು ಆ ಸ್ಥಾನಕ್ಕೆ ಬ್ಯೂ ವೆಬ್‌ ಸ್ಟಾರ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಕಳೆದ ನಾಲ್ಕು ಪಂದ್ಯಗಳಿಂದ ಆಸೀಸ್‌ ತಂಡದಲ್ಲಿ ಆಡಿದ್ದ ಮಿಚೆಲ್‌ ಮಾರ್ಷ್‌ ಫಾರ್ಮ್‌ ಕೊರತೆ ಎದುರಿಸುತ್ತಿದ್ದು, 4 ಟೆಸ್ಟ್‌ ಪಂದ್ಯಗಳಿಂದ 10.42ರ ಸರಾಸರಿಯಲ್ಲಿ ಕೇವಲ 72 ರನ್‌ ಮಾತ್ರ ಕಲೆಹಾಕಿದ್ದಾರೆ. ಫಿಟ್‌ನೆಸ್‌ ಸಮಸ್ಯೆಯ ಕಾರಣದಿಂದಾಗಿ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಬ್ಯೂ ವೆಬ್‌ಸ್ಟಾರ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್‌.

ಪಿಂಕ್‌ ಟೆಸ್ಟ್‌ ಎಂದು ಹೆಸರೇಕೆ?
ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಆಡುವ ಮೊದಲ ಪಂದ್ಯಕ್ಕೆ ಪಿಂಕ್‌ ಟೆಸ್ಟ್‌ ಎಂದು ಕರೆಯಲಾಗುತ್ತದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರರು ಪಿಂಕ್‌ ಕ್ಯಾಪ್‌ ಧರಿಸಿ ಆಡುತ್ತಾರೆ. ಇದರ ಉದ್ಧೇಶ ಸ್ತನ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದು.

ಆಸ್ಟ್ರೇಲಿಯಾದ ಮಾಜಿ ಆಟಗಾರ ಗ್ಲೆನ್‌ ಮೆಕ್‌ ಗ್ರಾತ್‌ ಅವರ ಪತ್ನಿ ಜೇನ್‌ ಮೆಕ್‌ಗ್ರಾತ್‌ ಸ್ತನ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಅವರ ನೆನಪಿಗಾಗಿ ಮೆಕ್‌ಗ್ರಾತ್‌ ಫೌಂಡೇಶನ್‌ ಸ್ಥಾಪಿಸಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದ್ದಾರೆ.

andolana

Recent Posts

ಯಾಕೆ ಇವತ್ತಿನ ಈ ಮಹಿಳಾ ದಿನ?

ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…

2 mins ago

ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯ ಚುರುಕು

ವೀರನಹೊಸಹಳ್ಳಿ: ಹಸಿ ಶುಂಠಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಉತ್ಪಾದನಾ ವೆಚ್ಚ ಹೆಚ್ಚುತ್ತಿದ್ದರೂ, ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯವು ಭರದಿಂದ…

6 mins ago

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

13 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

13 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

14 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

14 hours ago