ಕ್ರೀಡೆ

ಭಾರತ vs ಆಸ್ಟ್ರೇಲಿಯಾ ಕೊನೆಯ ಟೆಸ್ಟ್:‌ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಾಳೆಯಿಂದ (ಜನವರಿ 3) ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಮಹತ್ವದ ಬದಲಾವಣೆಯೊಂದಿಗೆ ಆಡುವ 11ರ ಬಳಗ ಪ್ರಕಟಿಸಿದೆ.

ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಅವರನ್ನು ಈ ಪಂದ್ಯದಿಂದ ಕೈಬಿಟ್ಟಿದ್ದು ಆ ಸ್ಥಾನಕ್ಕೆ ಬ್ಯೂ ವೆಬ್‌ ಸ್ಟಾರ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಕಳೆದ ನಾಲ್ಕು ಪಂದ್ಯಗಳಿಂದ ಆಸೀಸ್‌ ತಂಡದಲ್ಲಿ ಆಡಿದ್ದ ಮಿಚೆಲ್‌ ಮಾರ್ಷ್‌ ಫಾರ್ಮ್‌ ಕೊರತೆ ಎದುರಿಸುತ್ತಿದ್ದು, 4 ಟೆಸ್ಟ್‌ ಪಂದ್ಯಗಳಿಂದ 10.42ರ ಸರಾಸರಿಯಲ್ಲಿ ಕೇವಲ 72 ರನ್‌ ಮಾತ್ರ ಕಲೆಹಾಕಿದ್ದಾರೆ. ಫಿಟ್‌ನೆಸ್‌ ಸಮಸ್ಯೆಯ ಕಾರಣದಿಂದಾಗಿ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಬ್ಯೂ ವೆಬ್‌ಸ್ಟಾರ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್‌.

ಪಿಂಕ್‌ ಟೆಸ್ಟ್‌ ಎಂದು ಹೆಸರೇಕೆ?
ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಆಡುವ ಮೊದಲ ಪಂದ್ಯಕ್ಕೆ ಪಿಂಕ್‌ ಟೆಸ್ಟ್‌ ಎಂದು ಕರೆಯಲಾಗುತ್ತದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರರು ಪಿಂಕ್‌ ಕ್ಯಾಪ್‌ ಧರಿಸಿ ಆಡುತ್ತಾರೆ. ಇದರ ಉದ್ಧೇಶ ಸ್ತನ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದು.

ಆಸ್ಟ್ರೇಲಿಯಾದ ಮಾಜಿ ಆಟಗಾರ ಗ್ಲೆನ್‌ ಮೆಕ್‌ ಗ್ರಾತ್‌ ಅವರ ಪತ್ನಿ ಜೇನ್‌ ಮೆಕ್‌ಗ್ರಾತ್‌ ಸ್ತನ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಅವರ ನೆನಪಿಗಾಗಿ ಮೆಕ್‌ಗ್ರಾತ್‌ ಫೌಂಡೇಶನ್‌ ಸ್ಥಾಪಿಸಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದ್ದಾರೆ.

andolana

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

27 mins ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

1 hour ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

2 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

3 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

3 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

3 hours ago