ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಾಳೆಯಿಂದ (ಜನವರಿ 3) ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಮಹತ್ವದ ಬದಲಾವಣೆಯೊಂದಿಗೆ ಆಡುವ 11ರ ಬಳಗ ಪ್ರಕಟಿಸಿದೆ.
ಆಲ್ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಈ ಪಂದ್ಯದಿಂದ ಕೈಬಿಟ್ಟಿದ್ದು ಆ ಸ್ಥಾನಕ್ಕೆ ಬ್ಯೂ ವೆಬ್ ಸ್ಟಾರ್ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಕಳೆದ ನಾಲ್ಕು ಪಂದ್ಯಗಳಿಂದ ಆಸೀಸ್ ತಂಡದಲ್ಲಿ ಆಡಿದ್ದ ಮಿಚೆಲ್ ಮಾರ್ಷ್ ಫಾರ್ಮ್ ಕೊರತೆ ಎದುರಿಸುತ್ತಿದ್ದು, 4 ಟೆಸ್ಟ್ ಪಂದ್ಯಗಳಿಂದ 10.42ರ ಸರಾಸರಿಯಲ್ಲಿ ಕೇವಲ 72 ರನ್ ಮಾತ್ರ ಕಲೆಹಾಕಿದ್ದಾರೆ. ಫಿಟ್ನೆಸ್ ಸಮಸ್ಯೆಯ ಕಾರಣದಿಂದಾಗಿ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ ಎಂದು ನಾಯಕ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಪ್ಲೇಯಿಂಗ್ ಇಲವೆನ್: ಉಸ್ಮಾನ್ ಖ್ವಾಜಾ, ಸ್ಯಾಮ್ ಕೊನ್ಸ್ಟಾಸ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಬ್ಯೂ ವೆಬ್ಸ್ಟಾರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.
ಪಿಂಕ್ ಟೆಸ್ಟ್ ಎಂದು ಹೆಸರೇಕೆ?
ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಆಡುವ ಮೊದಲ ಪಂದ್ಯಕ್ಕೆ ಪಿಂಕ್ ಟೆಸ್ಟ್ ಎಂದು ಕರೆಯಲಾಗುತ್ತದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರರು ಪಿಂಕ್ ಕ್ಯಾಪ್ ಧರಿಸಿ ಆಡುತ್ತಾರೆ. ಇದರ ಉದ್ಧೇಶ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದು.
ಆಸ್ಟ್ರೇಲಿಯಾದ ಮಾಜಿ ಆಟಗಾರ ಗ್ಲೆನ್ ಮೆಕ್ ಗ್ರಾತ್ ಅವರ ಪತ್ನಿ ಜೇನ್ ಮೆಕ್ಗ್ರಾತ್ ಸ್ತನ ಕ್ಯಾನ್ಸರ್ನಿಂದ ಸಾವನ್ನಪ್ಪುತ್ತಾರೆ. ಅವರ ನೆನಪಿಗಾಗಿ ಮೆಕ್ಗ್ರಾತ್ ಫೌಂಡೇಶನ್ ಸ್ಥಾಪಿಸಿ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದ್ದಾರೆ.
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…