ಕ್ರೀಡೆ

ಭಾರತ vs ಆಸ್ಟ್ರೇಲಿಯಾ ಕೊನೆಯ ಟೆಸ್ಟ್:‌ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಾಳೆಯಿಂದ (ಜನವರಿ 3) ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಮಹತ್ವದ ಬದಲಾವಣೆಯೊಂದಿಗೆ ಆಡುವ 11ರ ಬಳಗ ಪ್ರಕಟಿಸಿದೆ.

ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಅವರನ್ನು ಈ ಪಂದ್ಯದಿಂದ ಕೈಬಿಟ್ಟಿದ್ದು ಆ ಸ್ಥಾನಕ್ಕೆ ಬ್ಯೂ ವೆಬ್‌ ಸ್ಟಾರ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಕಳೆದ ನಾಲ್ಕು ಪಂದ್ಯಗಳಿಂದ ಆಸೀಸ್‌ ತಂಡದಲ್ಲಿ ಆಡಿದ್ದ ಮಿಚೆಲ್‌ ಮಾರ್ಷ್‌ ಫಾರ್ಮ್‌ ಕೊರತೆ ಎದುರಿಸುತ್ತಿದ್ದು, 4 ಟೆಸ್ಟ್‌ ಪಂದ್ಯಗಳಿಂದ 10.42ರ ಸರಾಸರಿಯಲ್ಲಿ ಕೇವಲ 72 ರನ್‌ ಮಾತ್ರ ಕಲೆಹಾಕಿದ್ದಾರೆ. ಫಿಟ್‌ನೆಸ್‌ ಸಮಸ್ಯೆಯ ಕಾರಣದಿಂದಾಗಿ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಬ್ಯೂ ವೆಬ್‌ಸ್ಟಾರ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್‌.

ಪಿಂಕ್‌ ಟೆಸ್ಟ್‌ ಎಂದು ಹೆಸರೇಕೆ?
ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಆಡುವ ಮೊದಲ ಪಂದ್ಯಕ್ಕೆ ಪಿಂಕ್‌ ಟೆಸ್ಟ್‌ ಎಂದು ಕರೆಯಲಾಗುತ್ತದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರರು ಪಿಂಕ್‌ ಕ್ಯಾಪ್‌ ಧರಿಸಿ ಆಡುತ್ತಾರೆ. ಇದರ ಉದ್ಧೇಶ ಸ್ತನ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದು.

ಆಸ್ಟ್ರೇಲಿಯಾದ ಮಾಜಿ ಆಟಗಾರ ಗ್ಲೆನ್‌ ಮೆಕ್‌ ಗ್ರಾತ್‌ ಅವರ ಪತ್ನಿ ಜೇನ್‌ ಮೆಕ್‌ಗ್ರಾತ್‌ ಸ್ತನ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಅವರ ನೆನಪಿಗಾಗಿ ಮೆಕ್‌ಗ್ರಾತ್‌ ಫೌಂಡೇಶನ್‌ ಸ್ಥಾಪಿಸಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದ್ದಾರೆ.

andolana

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

11 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

12 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

12 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

13 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

13 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

13 hours ago