ಕ್ರೀಡೆ

ಭಾರತ vs ಆಸ್ಟ್ರೇಲಿಯಾ ಕೊನೆಯ ಟೆಸ್ಟ್:‌ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಾಳೆಯಿಂದ (ಜನವರಿ 3) ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಮಹತ್ವದ ಬದಲಾವಣೆಯೊಂದಿಗೆ ಆಡುವ 11ರ ಬಳಗ ಪ್ರಕಟಿಸಿದೆ.

ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಅವರನ್ನು ಈ ಪಂದ್ಯದಿಂದ ಕೈಬಿಟ್ಟಿದ್ದು ಆ ಸ್ಥಾನಕ್ಕೆ ಬ್ಯೂ ವೆಬ್‌ ಸ್ಟಾರ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಕಳೆದ ನಾಲ್ಕು ಪಂದ್ಯಗಳಿಂದ ಆಸೀಸ್‌ ತಂಡದಲ್ಲಿ ಆಡಿದ್ದ ಮಿಚೆಲ್‌ ಮಾರ್ಷ್‌ ಫಾರ್ಮ್‌ ಕೊರತೆ ಎದುರಿಸುತ್ತಿದ್ದು, 4 ಟೆಸ್ಟ್‌ ಪಂದ್ಯಗಳಿಂದ 10.42ರ ಸರಾಸರಿಯಲ್ಲಿ ಕೇವಲ 72 ರನ್‌ ಮಾತ್ರ ಕಲೆಹಾಕಿದ್ದಾರೆ. ಫಿಟ್‌ನೆಸ್‌ ಸಮಸ್ಯೆಯ ಕಾರಣದಿಂದಾಗಿ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಬ್ಯೂ ವೆಬ್‌ಸ್ಟಾರ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್‌.

ಪಿಂಕ್‌ ಟೆಸ್ಟ್‌ ಎಂದು ಹೆಸರೇಕೆ?
ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಆಡುವ ಮೊದಲ ಪಂದ್ಯಕ್ಕೆ ಪಿಂಕ್‌ ಟೆಸ್ಟ್‌ ಎಂದು ಕರೆಯಲಾಗುತ್ತದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರರು ಪಿಂಕ್‌ ಕ್ಯಾಪ್‌ ಧರಿಸಿ ಆಡುತ್ತಾರೆ. ಇದರ ಉದ್ಧೇಶ ಸ್ತನ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದು.

ಆಸ್ಟ್ರೇಲಿಯಾದ ಮಾಜಿ ಆಟಗಾರ ಗ್ಲೆನ್‌ ಮೆಕ್‌ ಗ್ರಾತ್‌ ಅವರ ಪತ್ನಿ ಜೇನ್‌ ಮೆಕ್‌ಗ್ರಾತ್‌ ಸ್ತನ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಅವರ ನೆನಪಿಗಾಗಿ ಮೆಕ್‌ಗ್ರಾತ್‌ ಫೌಂಡೇಶನ್‌ ಸ್ಥಾಪಿಸಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದ್ದಾರೆ.

andolana

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

43 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago