ಕ್ರೀಡೆ

ಭಾರತ vs ಆಸ್ಟ್ರೇಲಿಯಾ ಕೊನೆಯ ಟೆಸ್ಟ್:‌ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಾಳೆಯಿಂದ (ಜನವರಿ 3) ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಮಹತ್ವದ ಬದಲಾವಣೆಯೊಂದಿಗೆ ಆಡುವ 11ರ ಬಳಗ ಪ್ರಕಟಿಸಿದೆ.

ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಅವರನ್ನು ಈ ಪಂದ್ಯದಿಂದ ಕೈಬಿಟ್ಟಿದ್ದು ಆ ಸ್ಥಾನಕ್ಕೆ ಬ್ಯೂ ವೆಬ್‌ ಸ್ಟಾರ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಕಳೆದ ನಾಲ್ಕು ಪಂದ್ಯಗಳಿಂದ ಆಸೀಸ್‌ ತಂಡದಲ್ಲಿ ಆಡಿದ್ದ ಮಿಚೆಲ್‌ ಮಾರ್ಷ್‌ ಫಾರ್ಮ್‌ ಕೊರತೆ ಎದುರಿಸುತ್ತಿದ್ದು, 4 ಟೆಸ್ಟ್‌ ಪಂದ್ಯಗಳಿಂದ 10.42ರ ಸರಾಸರಿಯಲ್ಲಿ ಕೇವಲ 72 ರನ್‌ ಮಾತ್ರ ಕಲೆಹಾಕಿದ್ದಾರೆ. ಫಿಟ್‌ನೆಸ್‌ ಸಮಸ್ಯೆಯ ಕಾರಣದಿಂದಾಗಿ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಬ್ಯೂ ವೆಬ್‌ಸ್ಟಾರ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್‌.

ಪಿಂಕ್‌ ಟೆಸ್ಟ್‌ ಎಂದು ಹೆಸರೇಕೆ?
ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಆಡುವ ಮೊದಲ ಪಂದ್ಯಕ್ಕೆ ಪಿಂಕ್‌ ಟೆಸ್ಟ್‌ ಎಂದು ಕರೆಯಲಾಗುತ್ತದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರರು ಪಿಂಕ್‌ ಕ್ಯಾಪ್‌ ಧರಿಸಿ ಆಡುತ್ತಾರೆ. ಇದರ ಉದ್ಧೇಶ ಸ್ತನ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದು.

ಆಸ್ಟ್ರೇಲಿಯಾದ ಮಾಜಿ ಆಟಗಾರ ಗ್ಲೆನ್‌ ಮೆಕ್‌ ಗ್ರಾತ್‌ ಅವರ ಪತ್ನಿ ಜೇನ್‌ ಮೆಕ್‌ಗ್ರಾತ್‌ ಸ್ತನ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಅವರ ನೆನಪಿಗಾಗಿ ಮೆಕ್‌ಗ್ರಾತ್‌ ಫೌಂಡೇಶನ್‌ ಸ್ಥಾಪಿಸಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದ್ದಾರೆ.

andolana

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

1 hour ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

6 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

6 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

6 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

6 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

6 hours ago