ಕ್ರೀಡೆ

ಭಾರತ vs ಆಸ್ಟ್ರೇಲಿಯಾ ಕೊನೆಯ ಟೆಸ್ಟ್:‌ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಾಳೆಯಿಂದ (ಜನವರಿ 3) ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಮಹತ್ವದ ಬದಲಾವಣೆಯೊಂದಿಗೆ ಆಡುವ 11ರ ಬಳಗ ಪ್ರಕಟಿಸಿದೆ.

ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಅವರನ್ನು ಈ ಪಂದ್ಯದಿಂದ ಕೈಬಿಟ್ಟಿದ್ದು ಆ ಸ್ಥಾನಕ್ಕೆ ಬ್ಯೂ ವೆಬ್‌ ಸ್ಟಾರ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಕಳೆದ ನಾಲ್ಕು ಪಂದ್ಯಗಳಿಂದ ಆಸೀಸ್‌ ತಂಡದಲ್ಲಿ ಆಡಿದ್ದ ಮಿಚೆಲ್‌ ಮಾರ್ಷ್‌ ಫಾರ್ಮ್‌ ಕೊರತೆ ಎದುರಿಸುತ್ತಿದ್ದು, 4 ಟೆಸ್ಟ್‌ ಪಂದ್ಯಗಳಿಂದ 10.42ರ ಸರಾಸರಿಯಲ್ಲಿ ಕೇವಲ 72 ರನ್‌ ಮಾತ್ರ ಕಲೆಹಾಕಿದ್ದಾರೆ. ಫಿಟ್‌ನೆಸ್‌ ಸಮಸ್ಯೆಯ ಕಾರಣದಿಂದಾಗಿ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಬ್ಯೂ ವೆಬ್‌ಸ್ಟಾರ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್‌.

ಪಿಂಕ್‌ ಟೆಸ್ಟ್‌ ಎಂದು ಹೆಸರೇಕೆ?
ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಆಡುವ ಮೊದಲ ಪಂದ್ಯಕ್ಕೆ ಪಿಂಕ್‌ ಟೆಸ್ಟ್‌ ಎಂದು ಕರೆಯಲಾಗುತ್ತದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರರು ಪಿಂಕ್‌ ಕ್ಯಾಪ್‌ ಧರಿಸಿ ಆಡುತ್ತಾರೆ. ಇದರ ಉದ್ಧೇಶ ಸ್ತನ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದು.

ಆಸ್ಟ್ರೇಲಿಯಾದ ಮಾಜಿ ಆಟಗಾರ ಗ್ಲೆನ್‌ ಮೆಕ್‌ ಗ್ರಾತ್‌ ಅವರ ಪತ್ನಿ ಜೇನ್‌ ಮೆಕ್‌ಗ್ರಾತ್‌ ಸ್ತನ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಅವರ ನೆನಪಿಗಾಗಿ ಮೆಕ್‌ಗ್ರಾತ್‌ ಫೌಂಡೇಶನ್‌ ಸ್ಥಾಪಿಸಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದ್ದಾರೆ.

andolana

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 mins ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

29 mins ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

32 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

35 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

36 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

40 mins ago