ಕ್ರೀಡೆ

ಬಾಕ್ಸಿಂಗ್‌ ಡೇ ಟೆಸ್ಟ್‌: ಪ್ಲೇಯಿಂಗ್‌ 11 ಪ್ರಕಟಿಸಿದ ಆಸ್ಟ್ರೇಲಿಯಾ

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಬಾರ್ಡರ್‌-ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್‌ ಪಂದ್ಯವು ನಾಳೆ (ಡಿ.26) ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ಆರಂಭವಾಗಲಿದೆ.

ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ತನ್ನ ಪ್ಲೇಯಿಂಗ್‌ 11 ಪ್ರಕಟಿಸಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆ ಮಾಡಿದೆ. ಕಳೆದ ಮೂರು ಟೆಸ್ಟ್‌ ಪಂದ್ಯದಲ್ಲಿ ಆರಂಭಿಕನಾಗಿ ಆಡಿದ ನಾಥನ್‌ ಮೆಕ್‌ಸ್ವೀನಿ ಅವರ ಬದಲಿಗೆ ಯುವ ದಾಂಡಿಗ ಸ್ಯಾಮ್‌ ಕೊನ್‌ಸ್ಟಾಸ್‌ ಸ್ಥಾನ ಪಡೆದಿದ್ದಾರೆ. ಹಾಗೆಯೇ ಗಾಯದ ಕಾರಣದಿಂದಾಗಿ ಹೊರಗುಳಿದಿರುವ ಜೋಶ್‌ ಹ್ಯಾಝಲ್‌ವುಡ್‌ ಸ್ಥಾನದಲ್ಲಿ ಸ್ಕಾಟ್‌ ಬೋಲ್ಯಾಂಡ್‌ ಕಣಕ್ಕಿಳಿಯಲಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕರಾಗಿ ಉಸ್ಮಾನ್‌ ಖ್ವಾಜಾ ಜೊತೆ ಹೊಸದಾಗಿ ಸೇರ್ಪಡೆಯಾಗಿರುವ ಸ್ಯಾಮ್‌ ಕೊನ್‌ಸ್ಟಾಸ್‌ ಕಣಕ್ಕಿಳಿಯಲ್ಲಿದ್ದು, ಮೂರನೇ ಕ್ರಮಾಂಕದಲ್ಲಿ ಮಾರ್ನಸ್‌ ಲಾಬುಶೆನ್‌ ಆಡಲಿದ್ದಾರೆ. ಉಳಿದಂತೆ ಇಂದಿನ ಪಂದ್ಯಗಳಲ್ಲಿ ಆಡಿದ ಸ್ಥಾನದಲ್ಲೇ ಆಸ್ಟ್ರೇಲಿಯಾದ ಉಳಿದ ಬ್ಯಾಟರ್‌ಗಳು ಬ್ಯಾಟ್‌ ಬೀಸಲಿದ್ದಾರೆ.

ಇನ್ನು ಬೌಲಿಂಗ್‌ ವಿಭಾಗದಲ್ಲಿ ಸ್ಕಾಟ್‌ ಬೋಲ್ಯಾಂಡ್‌ ಪುನಃ ಸ್ಥಾನ ಪಡೆದಿದ್ದು, ಜೊತೆಯಲ್ಲಿ ವೇಗಿಗಳಾದ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌ ಹಾಗೂ ಸ್ಪಿನ್ನರ್‌ ನಾಥನ್‌ ಲಿಯಾನ್‌ ತಂಡದಲ್ಲಿದ್ದಾರೆ.

ಮೆಲ್ಬೋರ್ನ್‌ ಟೆಸ್ಟ್‌ ಪಂದ್ಯವು ಎರಡು ತಂಡಗಳಿಗೂ ಮುಖ್ಯವಾಗಿದೆ. ಈ ಮ್ಯಾಚ್‌ನಲ್ಲಿ ಗೆದ್ದ ತಂಡಕ್ಕೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ಹಾದಿ ಸುಗಮವಾಗಲಿದೆ.

ಆಸ್ಟ್ರೇಲಿಯಾ ಟೆಸ್ಟ್‌ ತಂಡ: ಪ್ಯಾಟ್‌ ಕಮಿನ್ಸ್‌ (ನಾಯಕ), ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ(ವಿಕೆಟ್‌ ಕೀಪರ್‌), ಮಿಚೆಲ್‌ ಸ್ಟಾರ್ಕ್‌, ಸ್ಕಾಟ್‌ ಬೋಲ್ಯಾಂಡ್‌, ನಾಥನ್‌ ಲಿಯಾನ್‌.

andolana

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

55 mins ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

1 hour ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

2 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

2 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

2 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

3 hours ago