ಕ್ರೀಡೆ

ಬಾಕ್ಸಿಂಗ್‌ ಡೇ ಟೆಸ್ಟ್‌: ಪ್ಲೇಯಿಂಗ್‌ 11 ಪ್ರಕಟಿಸಿದ ಆಸ್ಟ್ರೇಲಿಯಾ

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಬಾರ್ಡರ್‌-ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್‌ ಪಂದ್ಯವು ನಾಳೆ (ಡಿ.26) ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ಆರಂಭವಾಗಲಿದೆ.

ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ತನ್ನ ಪ್ಲೇಯಿಂಗ್‌ 11 ಪ್ರಕಟಿಸಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆ ಮಾಡಿದೆ. ಕಳೆದ ಮೂರು ಟೆಸ್ಟ್‌ ಪಂದ್ಯದಲ್ಲಿ ಆರಂಭಿಕನಾಗಿ ಆಡಿದ ನಾಥನ್‌ ಮೆಕ್‌ಸ್ವೀನಿ ಅವರ ಬದಲಿಗೆ ಯುವ ದಾಂಡಿಗ ಸ್ಯಾಮ್‌ ಕೊನ್‌ಸ್ಟಾಸ್‌ ಸ್ಥಾನ ಪಡೆದಿದ್ದಾರೆ. ಹಾಗೆಯೇ ಗಾಯದ ಕಾರಣದಿಂದಾಗಿ ಹೊರಗುಳಿದಿರುವ ಜೋಶ್‌ ಹ್ಯಾಝಲ್‌ವುಡ್‌ ಸ್ಥಾನದಲ್ಲಿ ಸ್ಕಾಟ್‌ ಬೋಲ್ಯಾಂಡ್‌ ಕಣಕ್ಕಿಳಿಯಲಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕರಾಗಿ ಉಸ್ಮಾನ್‌ ಖ್ವಾಜಾ ಜೊತೆ ಹೊಸದಾಗಿ ಸೇರ್ಪಡೆಯಾಗಿರುವ ಸ್ಯಾಮ್‌ ಕೊನ್‌ಸ್ಟಾಸ್‌ ಕಣಕ್ಕಿಳಿಯಲ್ಲಿದ್ದು, ಮೂರನೇ ಕ್ರಮಾಂಕದಲ್ಲಿ ಮಾರ್ನಸ್‌ ಲಾಬುಶೆನ್‌ ಆಡಲಿದ್ದಾರೆ. ಉಳಿದಂತೆ ಇಂದಿನ ಪಂದ್ಯಗಳಲ್ಲಿ ಆಡಿದ ಸ್ಥಾನದಲ್ಲೇ ಆಸ್ಟ್ರೇಲಿಯಾದ ಉಳಿದ ಬ್ಯಾಟರ್‌ಗಳು ಬ್ಯಾಟ್‌ ಬೀಸಲಿದ್ದಾರೆ.

ಇನ್ನು ಬೌಲಿಂಗ್‌ ವಿಭಾಗದಲ್ಲಿ ಸ್ಕಾಟ್‌ ಬೋಲ್ಯಾಂಡ್‌ ಪುನಃ ಸ್ಥಾನ ಪಡೆದಿದ್ದು, ಜೊತೆಯಲ್ಲಿ ವೇಗಿಗಳಾದ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌ ಹಾಗೂ ಸ್ಪಿನ್ನರ್‌ ನಾಥನ್‌ ಲಿಯಾನ್‌ ತಂಡದಲ್ಲಿದ್ದಾರೆ.

ಮೆಲ್ಬೋರ್ನ್‌ ಟೆಸ್ಟ್‌ ಪಂದ್ಯವು ಎರಡು ತಂಡಗಳಿಗೂ ಮುಖ್ಯವಾಗಿದೆ. ಈ ಮ್ಯಾಚ್‌ನಲ್ಲಿ ಗೆದ್ದ ತಂಡಕ್ಕೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ಹಾದಿ ಸುಗಮವಾಗಲಿದೆ.

ಆಸ್ಟ್ರೇಲಿಯಾ ಟೆಸ್ಟ್‌ ತಂಡ: ಪ್ಯಾಟ್‌ ಕಮಿನ್ಸ್‌ (ನಾಯಕ), ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ(ವಿಕೆಟ್‌ ಕೀಪರ್‌), ಮಿಚೆಲ್‌ ಸ್ಟಾರ್ಕ್‌, ಸ್ಕಾಟ್‌ ಬೋಲ್ಯಾಂಡ್‌, ನಾಥನ್‌ ಲಿಯಾನ್‌.

andolana

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

11 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

12 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

12 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

12 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

12 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

12 hours ago