ಕ್ರೀಡೆ

ಬಾಕ್ಸಿಂಗ್‌ ಡೇ ಟೆಸ್ಟ್‌: ಪ್ಲೇಯಿಂಗ್‌ 11 ಪ್ರಕಟಿಸಿದ ಆಸ್ಟ್ರೇಲಿಯಾ

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಬಾರ್ಡರ್‌-ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್‌ ಪಂದ್ಯವು ನಾಳೆ (ಡಿ.26) ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ಆರಂಭವಾಗಲಿದೆ.

ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ತನ್ನ ಪ್ಲೇಯಿಂಗ್‌ 11 ಪ್ರಕಟಿಸಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆ ಮಾಡಿದೆ. ಕಳೆದ ಮೂರು ಟೆಸ್ಟ್‌ ಪಂದ್ಯದಲ್ಲಿ ಆರಂಭಿಕನಾಗಿ ಆಡಿದ ನಾಥನ್‌ ಮೆಕ್‌ಸ್ವೀನಿ ಅವರ ಬದಲಿಗೆ ಯುವ ದಾಂಡಿಗ ಸ್ಯಾಮ್‌ ಕೊನ್‌ಸ್ಟಾಸ್‌ ಸ್ಥಾನ ಪಡೆದಿದ್ದಾರೆ. ಹಾಗೆಯೇ ಗಾಯದ ಕಾರಣದಿಂದಾಗಿ ಹೊರಗುಳಿದಿರುವ ಜೋಶ್‌ ಹ್ಯಾಝಲ್‌ವುಡ್‌ ಸ್ಥಾನದಲ್ಲಿ ಸ್ಕಾಟ್‌ ಬೋಲ್ಯಾಂಡ್‌ ಕಣಕ್ಕಿಳಿಯಲಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕರಾಗಿ ಉಸ್ಮಾನ್‌ ಖ್ವಾಜಾ ಜೊತೆ ಹೊಸದಾಗಿ ಸೇರ್ಪಡೆಯಾಗಿರುವ ಸ್ಯಾಮ್‌ ಕೊನ್‌ಸ್ಟಾಸ್‌ ಕಣಕ್ಕಿಳಿಯಲ್ಲಿದ್ದು, ಮೂರನೇ ಕ್ರಮಾಂಕದಲ್ಲಿ ಮಾರ್ನಸ್‌ ಲಾಬುಶೆನ್‌ ಆಡಲಿದ್ದಾರೆ. ಉಳಿದಂತೆ ಇಂದಿನ ಪಂದ್ಯಗಳಲ್ಲಿ ಆಡಿದ ಸ್ಥಾನದಲ್ಲೇ ಆಸ್ಟ್ರೇಲಿಯಾದ ಉಳಿದ ಬ್ಯಾಟರ್‌ಗಳು ಬ್ಯಾಟ್‌ ಬೀಸಲಿದ್ದಾರೆ.

ಇನ್ನು ಬೌಲಿಂಗ್‌ ವಿಭಾಗದಲ್ಲಿ ಸ್ಕಾಟ್‌ ಬೋಲ್ಯಾಂಡ್‌ ಪುನಃ ಸ್ಥಾನ ಪಡೆದಿದ್ದು, ಜೊತೆಯಲ್ಲಿ ವೇಗಿಗಳಾದ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌ ಹಾಗೂ ಸ್ಪಿನ್ನರ್‌ ನಾಥನ್‌ ಲಿಯಾನ್‌ ತಂಡದಲ್ಲಿದ್ದಾರೆ.

ಮೆಲ್ಬೋರ್ನ್‌ ಟೆಸ್ಟ್‌ ಪಂದ್ಯವು ಎರಡು ತಂಡಗಳಿಗೂ ಮುಖ್ಯವಾಗಿದೆ. ಈ ಮ್ಯಾಚ್‌ನಲ್ಲಿ ಗೆದ್ದ ತಂಡಕ್ಕೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ಹಾದಿ ಸುಗಮವಾಗಲಿದೆ.

ಆಸ್ಟ್ರೇಲಿಯಾ ಟೆಸ್ಟ್‌ ತಂಡ: ಪ್ಯಾಟ್‌ ಕಮಿನ್ಸ್‌ (ನಾಯಕ), ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ(ವಿಕೆಟ್‌ ಕೀಪರ್‌), ಮಿಚೆಲ್‌ ಸ್ಟಾರ್ಕ್‌, ಸ್ಕಾಟ್‌ ಬೋಲ್ಯಾಂಡ್‌, ನಾಥನ್‌ ಲಿಯಾನ್‌.

andolana

Recent Posts

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

21 mins ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

1 hour ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

1 hour ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

4 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

4 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

4 hours ago