ಕ್ರೀಡೆ

ಬಾಕ್ಸಿಂಗ್‌ ಡೇ ಟೆಸ್ಟ್‌: ಪ್ಲೇಯಿಂಗ್‌ 11 ಪ್ರಕಟಿಸಿದ ಆಸ್ಟ್ರೇಲಿಯಾ

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಬಾರ್ಡರ್‌-ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್‌ ಪಂದ್ಯವು ನಾಳೆ (ಡಿ.26) ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ಆರಂಭವಾಗಲಿದೆ.

ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ತನ್ನ ಪ್ಲೇಯಿಂಗ್‌ 11 ಪ್ರಕಟಿಸಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆ ಮಾಡಿದೆ. ಕಳೆದ ಮೂರು ಟೆಸ್ಟ್‌ ಪಂದ್ಯದಲ್ಲಿ ಆರಂಭಿಕನಾಗಿ ಆಡಿದ ನಾಥನ್‌ ಮೆಕ್‌ಸ್ವೀನಿ ಅವರ ಬದಲಿಗೆ ಯುವ ದಾಂಡಿಗ ಸ್ಯಾಮ್‌ ಕೊನ್‌ಸ್ಟಾಸ್‌ ಸ್ಥಾನ ಪಡೆದಿದ್ದಾರೆ. ಹಾಗೆಯೇ ಗಾಯದ ಕಾರಣದಿಂದಾಗಿ ಹೊರಗುಳಿದಿರುವ ಜೋಶ್‌ ಹ್ಯಾಝಲ್‌ವುಡ್‌ ಸ್ಥಾನದಲ್ಲಿ ಸ್ಕಾಟ್‌ ಬೋಲ್ಯಾಂಡ್‌ ಕಣಕ್ಕಿಳಿಯಲಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕರಾಗಿ ಉಸ್ಮಾನ್‌ ಖ್ವಾಜಾ ಜೊತೆ ಹೊಸದಾಗಿ ಸೇರ್ಪಡೆಯಾಗಿರುವ ಸ್ಯಾಮ್‌ ಕೊನ್‌ಸ್ಟಾಸ್‌ ಕಣಕ್ಕಿಳಿಯಲ್ಲಿದ್ದು, ಮೂರನೇ ಕ್ರಮಾಂಕದಲ್ಲಿ ಮಾರ್ನಸ್‌ ಲಾಬುಶೆನ್‌ ಆಡಲಿದ್ದಾರೆ. ಉಳಿದಂತೆ ಇಂದಿನ ಪಂದ್ಯಗಳಲ್ಲಿ ಆಡಿದ ಸ್ಥಾನದಲ್ಲೇ ಆಸ್ಟ್ರೇಲಿಯಾದ ಉಳಿದ ಬ್ಯಾಟರ್‌ಗಳು ಬ್ಯಾಟ್‌ ಬೀಸಲಿದ್ದಾರೆ.

ಇನ್ನು ಬೌಲಿಂಗ್‌ ವಿಭಾಗದಲ್ಲಿ ಸ್ಕಾಟ್‌ ಬೋಲ್ಯಾಂಡ್‌ ಪುನಃ ಸ್ಥಾನ ಪಡೆದಿದ್ದು, ಜೊತೆಯಲ್ಲಿ ವೇಗಿಗಳಾದ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌ ಹಾಗೂ ಸ್ಪಿನ್ನರ್‌ ನಾಥನ್‌ ಲಿಯಾನ್‌ ತಂಡದಲ್ಲಿದ್ದಾರೆ.

ಮೆಲ್ಬೋರ್ನ್‌ ಟೆಸ್ಟ್‌ ಪಂದ್ಯವು ಎರಡು ತಂಡಗಳಿಗೂ ಮುಖ್ಯವಾಗಿದೆ. ಈ ಮ್ಯಾಚ್‌ನಲ್ಲಿ ಗೆದ್ದ ತಂಡಕ್ಕೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ಹಾದಿ ಸುಗಮವಾಗಲಿದೆ.

ಆಸ್ಟ್ರೇಲಿಯಾ ಟೆಸ್ಟ್‌ ತಂಡ: ಪ್ಯಾಟ್‌ ಕಮಿನ್ಸ್‌ (ನಾಯಕ), ಉಸ್ಮಾನ್‌ ಖ್ವಾಜಾ, ಸ್ಯಾಮ್‌ ಕೊನ್‌ಸ್ಟಾಸ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ(ವಿಕೆಟ್‌ ಕೀಪರ್‌), ಮಿಚೆಲ್‌ ಸ್ಟಾರ್ಕ್‌, ಸ್ಕಾಟ್‌ ಬೋಲ್ಯಾಂಡ್‌, ನಾಥನ್‌ ಲಿಯಾನ್‌.

andolana

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

14 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

15 hours ago