ಕ್ರೀಡೆ

ಪಿಂಕ್‌ ಬಾಲ್‌ ಟೆಸ್ಟ್: ಅಧಿಕೃತವಾಗಿ ಪ್ಲೇಯಿಂಗ್‌ 11 ಘೋಷಿಸಿದ ಆಸ್ಟ್ರೇಲಿಯಾ

ಅಡಿಲೇಡ್:‌ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯ ಎರಡನೇ ಪಂದ್ಯವು ನಾಳೆ ( ಡಿ.6 ) ಅಡಿಲೇಡ್‌ನಲ್ಲಿ ಆರಂಭವಾಗಲಿದ್ದು, ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಇಂಡಿಯಾ ವಿರುದ್ಧ 295 ರನ್‌ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದ್ದ ಆಸ್ಟ್ರೇಲಿಯಾ ಸೇಡು ತೀರಿಸಿಕೊಳ್ಳಲು ಕಾತರವಾಗಿದೆ.

ಶುಕ್ರವಾರ ಆರಂಭವಾಗಲಿರುವ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ಆಡುವ ಇಲವೆನ್‌ ಆಟಗಾರರನ್ನು ಘೋಷಿಸಿದೆ. ಈ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಿದ್ದು ಹೇಜಲ್‌ವುಡ್ ಸ್ಥಾನಕ್ಕೆ ಸ್ಕಾಟ್‌ ಬೋಲ್ಯಾಂಡ್‌ ಸೇರ್ಪಡೆಯಾಗಿದ್ದಾರೆ.

ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಜೋಶ್‌ ಹೇಜಲ್‌ವುಡ್ ಗಾಯವಾಗಿ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಸ್ಕಾಟ್‌ ಬೋಲ್ಯಾಂಡ್‌ ಸೇರ್ಪಡೆಯಾಗಿದ್ದಾರೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪರ ಆರಂಭಿಕರಾಗಿ ಉಸ್ಮಾನ್‌ ಖ್ವಾಜಾ ಹಾಗೂ ನಾಥನ್‌ ಮೆಕ್‌ಸ್ವೀನಿ ಇನ್ನಿಂಗ್ಸ್‌ ಆರಂಭಿಸಲಿದ್ದು, ನಂತರದ ಬ್ಯಾಟರ್‌ಗಳಾಗಿ ಮಾರ್ನಶ್‌ ಲಬುಶೇನ್‌, ಸ್ಟೀವ್‌ ಸ್ಮಿತ್‌ ಆಡಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಸ್‌ ಹೆಡ್‌, ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಬ್ಯಾಟ್‌ ಬೀಸಲಿದ್ದಾರೆ.

ಬೌಲಿಂಗ್‌ ವಿಭಾಗದಲ್ಲಿ ವೇಗಿಗಳಾಗಿ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌, ಸ್ಕಾಟ್‌ ಬೋಲ್ಯಾಂಡ್ ತಮ್ಮ ಕರಾಮತ್ತು ತೋರಿಸಲು ಸಜ್ಜಾಗಿದ್ದು ಸ್ಪೀನ್‌ ವಿಭಾಗದಲ್ಲಿ ನಾಥನ್‌ ಲಿಯಾನ್‌ ಇದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ನಾಥನ್‌ ಮೆಕ್‌ಸ್ವೀನಿ, ಮಾರ್ನಸ್‌ ಲಾಬುಶೇನ್‌,ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ(ವಿಕೆಟ್‌ ಕೀಪರ್)‌, ಪ್ಯಾಟ್‌ ಕಮಿನ್ಸ್ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್

andolana

Recent Posts

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

9 mins ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

22 mins ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

1 hour ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

2 hours ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

2 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

2 hours ago