ಕ್ರೀಡೆ

ಪಿಂಕ್‌ ಬಾಲ್‌ ಟೆಸ್ಟ್: ಅಧಿಕೃತವಾಗಿ ಪ್ಲೇಯಿಂಗ್‌ 11 ಘೋಷಿಸಿದ ಆಸ್ಟ್ರೇಲಿಯಾ

ಅಡಿಲೇಡ್:‌ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯ ಎರಡನೇ ಪಂದ್ಯವು ನಾಳೆ ( ಡಿ.6 ) ಅಡಿಲೇಡ್‌ನಲ್ಲಿ ಆರಂಭವಾಗಲಿದ್ದು, ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಇಂಡಿಯಾ ವಿರುದ್ಧ 295 ರನ್‌ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದ್ದ ಆಸ್ಟ್ರೇಲಿಯಾ ಸೇಡು ತೀರಿಸಿಕೊಳ್ಳಲು ಕಾತರವಾಗಿದೆ.

ಶುಕ್ರವಾರ ಆರಂಭವಾಗಲಿರುವ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ಆಡುವ ಇಲವೆನ್‌ ಆಟಗಾರರನ್ನು ಘೋಷಿಸಿದೆ. ಈ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಿದ್ದು ಹೇಜಲ್‌ವುಡ್ ಸ್ಥಾನಕ್ಕೆ ಸ್ಕಾಟ್‌ ಬೋಲ್ಯಾಂಡ್‌ ಸೇರ್ಪಡೆಯಾಗಿದ್ದಾರೆ.

ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಜೋಶ್‌ ಹೇಜಲ್‌ವುಡ್ ಗಾಯವಾಗಿ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಸ್ಕಾಟ್‌ ಬೋಲ್ಯಾಂಡ್‌ ಸೇರ್ಪಡೆಯಾಗಿದ್ದಾರೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪರ ಆರಂಭಿಕರಾಗಿ ಉಸ್ಮಾನ್‌ ಖ್ವಾಜಾ ಹಾಗೂ ನಾಥನ್‌ ಮೆಕ್‌ಸ್ವೀನಿ ಇನ್ನಿಂಗ್ಸ್‌ ಆರಂಭಿಸಲಿದ್ದು, ನಂತರದ ಬ್ಯಾಟರ್‌ಗಳಾಗಿ ಮಾರ್ನಶ್‌ ಲಬುಶೇನ್‌, ಸ್ಟೀವ್‌ ಸ್ಮಿತ್‌ ಆಡಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಸ್‌ ಹೆಡ್‌, ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಬ್ಯಾಟ್‌ ಬೀಸಲಿದ್ದಾರೆ.

ಬೌಲಿಂಗ್‌ ವಿಭಾಗದಲ್ಲಿ ವೇಗಿಗಳಾಗಿ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌, ಸ್ಕಾಟ್‌ ಬೋಲ್ಯಾಂಡ್ ತಮ್ಮ ಕರಾಮತ್ತು ತೋರಿಸಲು ಸಜ್ಜಾಗಿದ್ದು ಸ್ಪೀನ್‌ ವಿಭಾಗದಲ್ಲಿ ನಾಥನ್‌ ಲಿಯಾನ್‌ ಇದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ನಾಥನ್‌ ಮೆಕ್‌ಸ್ವೀನಿ, ಮಾರ್ನಸ್‌ ಲಾಬುಶೇನ್‌,ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ(ವಿಕೆಟ್‌ ಕೀಪರ್)‌, ಪ್ಯಾಟ್‌ ಕಮಿನ್ಸ್ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್

andolana

Recent Posts

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

17 mins ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

39 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

2 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

3 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

5 hours ago