ಕ್ರೀಡೆ

ಅಡಿಲೇಡ್‌ ಟೆಸ್ಟ್: ಸ್ಟಾರ್ಕ್‌ ಬೌಲಿಂಗ್‌ ದಾಳಿ ತತ್ತರಿಸಿದ ಭಾರತ; 180 ರನ್‌ಗೆ ಆಲ್‌ಔಟ್‌

ಅಡಿಲೇಡ್:‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್‌ (ಹಗಲು-ರಾತ್ರಿ) ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 180 ರನ್‌ಗಳಿಗೆ ಆಲೌಟ್‌ ಆಗಿದೆ. ಮಿಚೆಲ್‌ ಸ್ಟಾರ್ಕ್‌ 6 ವಿಕೆಟ್‌ ಉರುಳಿಸುವ ಮೂಲಕ ಭಾರತದ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದಾರೆ.

ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಆಯ್ದುಕೊಂಡರು. ಪರ್ತ್‌ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕೆಎಲ್‌ ರಾಹುಲ್‌ ಮತ್ತು ಯಶಸ್ವಿ ಜೈಸ್ವಾಲ್‌ ಆರಂಭಿಕ ಜೋಡಿ ಈ ಬಾರಿ ವಿಫಲವಾಯಿತು. ಯಶಸ್ವಿ ಜೈಸ್ವಾಲ್‌ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸೊನ್ನೆ ಸುತ್ತಿದ ಹಾಗೆ ಇಲ್ಲೂ ಸ್ಟಾರ್ಕ್‌ಗೆ ವಿಕೆಟ್‌ ಒಪ್ಪಿಸುವ ಮೂಲಕ ಮೊದಲ ಎಸೆತದಲ್ಲೇ ಔಟಾದರು.

ನಂತರ ಶುಭಮನ್‌ ಗಿಲ್‌ 31 ಹಾಗೂ ಕೆಎಲ್‌ ರಾಹುಲ್‌ 37 ರನ್‌ಗಳ ಕಾಣಿಕೆ ಜೊತೆಗೆ 69 ರನ್‌ಗಳ ಜೊತೆಯಾಟವನ್ನು ಆಡಿದರು. ಕೆಎಲ್‌ ರಾಹುಲ್‌ ವಿಕೆಟ್‌ ಪತನದ ಬಳಿಕ ನಂತರದ ಬ್ಯಾಟರ್‌ಗಳ ಪೆವಿಲಿಯನ್‌ ಪರೇಡ್‌ ಶುರುವಾಯಿತು.

ವಿರಾಟ್‌ ಕೊಹ್ಲಿ (7) ಕ್ರೀಸ್‌ಗೆ ಬಂದ ಕೂಡಲೇ ಕೆಟ್ಟ ಹೊಡೆತಕ್ಕೆ ಕೈ ಹಾಕಿ ಸ್ಟೀವ್‌ ಸ್ಮಿತ್‌ಗೆ ಕ್ಯಾಚ್‌ ನೀಡಿ ಔಟಾದರು. ಬಳಿಕ‌ ಬಂದ ರೋಹಿತ್‌ (3) ಕೂಡ ಬಂದ ದಾರಿಗೆ ಶುಂಕವಿಲ್ಲ ಎಂಬಂತೆ ಕೊಹ್ಲಿ ಹಾದಿ ಹಿಡಿದರು. ನಂತರ ವಿಕೆಟ್‌ ಕೀಪರ್‌ ರಿಷಭ್‌ ಪಂತ್ ಸ್ವಲ್ಪ ಭರವಸೆ ಮೂಡಿಸಿದರು ಆದರೆ ಕಮಿನ್ಸ್‌ ಬಾಲ್‌ನಲ್ಲಿ 21 ರನ್‌ಗಳಿಸಿ ಔಟಾದರು.

ಭಾರತದ ಬ್ಯಾಟರ್‌ಗಳ ವಿಫಲದಿಂದ 6 ವಿಕೆಟ್‌ಗಳ ನಷ್ಟಕ್ಕೆ 109 ರನ್‌ಗಳಿಸಿ ಸಂಕಷ್ಟದಲ್ಲಿದ್ದ ತಂಡಕ್ಕೆ 7ನೇ ಕ್ರಮಾಂಕದಲ್ಲಿ ಆಡಲು ಬಂದ ಆಲ್‌ರೌಂಡರ್‌ ನಿತೀಶ್‌ ರೆಡ್ಡಿ ಆಸರೆಯಾದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಹಿತ 42 ರನ್‌ಗಳ ಸ್ಪೋಟಕ ಬ್ಯಾಟಿಂಗ್‌ ಮಾಡಿದರು. ಇದರಿಂದ ಇಂಡಿಯಾ ಹೀನಾಯ ಮೊತ್ತಕ್ಕೆ ಆಲ್‌ಔಟ್‌ ಆಗುವುದರಿಂದ ಪಾರು ಮಾಡಿದರು.

ಆಸ್ಟ್ರೇಲಿಯಾದ ಪರ ಅದ್ಭುತ ಬೌಲಿಂಗ್‌ ಮಾಡಿದ ಮಿಚೆಲ್‌ ಸ್ಟಾರ್ಕ್‌ ಕೇವಲ 48 ರನ್‌ ನೀಡಿ 6 ವಿಕೆಟ್‌ ಪಡೆದರು. ಉಳಿದಂತೆ ಪ್ಯಾಟ್‌ ಕಮಿನ್ಸ್‌ ಹಾಗೂ ಸ್ಕಾಟ್‌ ಬೋಲ್ಯಾಂಡ್‌ ತಲಾ 2 ವಿಕೆಟ್‌ ಕಬಳಿಸಿದರು.

andolana

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

2 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

7 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

7 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

7 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

7 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

7 hours ago