ಕ್ರೀಡೆ

ಅಭ್ಯಾಸ ಪಂದ್ಯ: ಆಸ್ಟ್ರೇಲಿಯಾಗೆ ಅಘಾತ ನೀಡಿದ ಇಂಡಿಯಾ

ಕ್ಯಾನ್‌ಬೆರಾ: ಆಸ್ಟ್ರೇಲಿಯಾ ವಿರುದ್ಧದ ಪಿಂಕ್‌ಬಾಲ್‌ (ಹಗಲು-ರಾತ್ರಿ) ಟೆಸ್ಟ್‌ಗಾಗಿ ಸಿದ್ಧತೆ ನಡೆಸುತ್ತಿರುವ ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದೆ.

ಆಸ್ಟ್ರೇಲಿಯಾ ಪ್ರೈಮ್‌ ಮಿನಿಸ್ಟರ್ಸ್‌ ಇಲವೆನ್‌ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ, ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಫೀಲ್ಡಿಂಗ್‌ ಆಯ್ದುಕೊಂಡರು. ಇನ್ನಿಂಗ್ಸ್‌ ಆರಂಭಿಸಿದ ಅತಿಥೇಯ ಆಸ್ಟ್ರೇಲಿಯಾಗೆ ಮಹಮ್ಮದ್‌ ಸಿರಾಜ್‌ ಆರಂಭದಲ್ಲೇ ಅಘಾತ ನೀಡಿದ್ದಾರೆ.

ಸ್ಯಾಮ್‌ ಕಾನ್ಸ್‌ಟಾಸ್ ಜೊತೆ ಇನ್ನಿಂಗ್ಸ್‌ ಆರಂಭಿಸಿದ ಮ್ಯಾಟ್‌ ರೆನ್‌ಶಾ ಕೇವಲ 5 ರನ್‌ ಗಳಿಸಿ ಮೊಹಮ್ಮದ್‌ ಸಿರಾಜ್‌ಗೆ ವಿಕೆಟ್‌ ಒಪ್ಪಿಸಿದರು. ನಂತರ ಬಂದ ಜೇಡನ್‌ ಗುಡ್‌ವಿನ್‌ 4 ರನ್‌, ಆಕಾಶ್‌ ದೀಪ್‌ ಬೌಲಿಂಗ್‌ನಲ್ಲಿ ಪೆವಿಲಿಯನ್‌ ಹಾದಿ ಹಿಡಿದರು.

5.3 ಓವರ್‌ಗಳಾಗಿದ್ದಾಗ ಮಳೆ ಸುರಿದ ಕಾರಣ, ಪಂದ್ಯ ಕೆಲ ಹೊತ್ತು ನಿಂತಿತ್ತು. ನಂತರ ಪುನಃ ಇನ್ನಿಂಗ್ಸ್‌ ಆರಂಭಿಸಿದ ಅಸ್ಟ್ರೇಲಿಯಾ ತಂಡವು ದಿನದ ಅಂತ್ಯಕ್ಕೆ 7 ಓವರ್‌ಗಳಲ್ಲಿ 2 ವಿಕೆಟ್‌ಗೆ 22ರನ್‌ ಗಳಿಸಿದೆ.

ಪಂದ್ಯ ಆರಂಭವಾಗುವ ಮೊದಲೇ ಸಂಪೂರ್ಣವಾಗಿ ಮಳೆ ಸುರಿದ ಕಾರಣ ಮೊದಲ ದಿನದ ಆಟ ರದ್ದಾಗಿತ್ತು. ಹೀಗಾಗಿ, ಇಂದು 50 ಓವರ್‌ಗಳಿಗೆ ಮಾತ್ರ ಪಂದ್ಯ ನಡೆಯುತ್ತಿದೆ. ಅತಿಥೇಯ ಆಸ್ಟ್ರೇಲಿಯಾ ತಂಡವನ್ನು ಜಾಕ್‌ ಎಡ್ವರ್ಡ್ಸ್‌ ಮುನ್ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

2 mins ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

43 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago