ಕ್ಯಾನ್ಬೆರಾ: ಆಸ್ಟ್ರೇಲಿಯಾ ವಿರುದ್ಧದ ಪಿಂಕ್ಬಾಲ್ (ಹಗಲು-ರಾತ್ರಿ) ಟೆಸ್ಟ್ಗಾಗಿ ಸಿದ್ಧತೆ ನಡೆಸುತ್ತಿರುವ ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದೆ.
ಆಸ್ಟ್ರೇಲಿಯಾ ಪ್ರೈಮ್ ಮಿನಿಸ್ಟರ್ಸ್ ಇಲವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡರು. ಇನ್ನಿಂಗ್ಸ್ ಆರಂಭಿಸಿದ ಅತಿಥೇಯ ಆಸ್ಟ್ರೇಲಿಯಾಗೆ ಮಹಮ್ಮದ್ ಸಿರಾಜ್ ಆರಂಭದಲ್ಲೇ ಅಘಾತ ನೀಡಿದ್ದಾರೆ.
ಸ್ಯಾಮ್ ಕಾನ್ಸ್ಟಾಸ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಮ್ಯಾಟ್ ರೆನ್ಶಾ ಕೇವಲ 5 ರನ್ ಗಳಿಸಿ ಮೊಹಮ್ಮದ್ ಸಿರಾಜ್ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಜೇಡನ್ ಗುಡ್ವಿನ್ 4 ರನ್, ಆಕಾಶ್ ದೀಪ್ ಬೌಲಿಂಗ್ನಲ್ಲಿ ಪೆವಿಲಿಯನ್ ಹಾದಿ ಹಿಡಿದರು.
5.3 ಓವರ್ಗಳಾಗಿದ್ದಾಗ ಮಳೆ ಸುರಿದ ಕಾರಣ, ಪಂದ್ಯ ಕೆಲ ಹೊತ್ತು ನಿಂತಿತ್ತು. ನಂತರ ಪುನಃ ಇನ್ನಿಂಗ್ಸ್ ಆರಂಭಿಸಿದ ಅಸ್ಟ್ರೇಲಿಯಾ ತಂಡವು ದಿನದ ಅಂತ್ಯಕ್ಕೆ 7 ಓವರ್ಗಳಲ್ಲಿ 2 ವಿಕೆಟ್ಗೆ 22ರನ್ ಗಳಿಸಿದೆ.
ಪಂದ್ಯ ಆರಂಭವಾಗುವ ಮೊದಲೇ ಸಂಪೂರ್ಣವಾಗಿ ಮಳೆ ಸುರಿದ ಕಾರಣ ಮೊದಲ ದಿನದ ಆಟ ರದ್ದಾಗಿತ್ತು. ಹೀಗಾಗಿ, ಇಂದು 50 ಓವರ್ಗಳಿಗೆ ಮಾತ್ರ ಪಂದ್ಯ ನಡೆಯುತ್ತಿದೆ. ಅತಿಥೇಯ ಆಸ್ಟ್ರೇಲಿಯಾ ತಂಡವನ್ನು ಜಾಕ್ ಎಡ್ವರ್ಡ್ಸ್ ಮುನ್ನಡೆಸುತ್ತಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…