ಕ್ಯಾನ್ಬೆರಾ: ಆಸ್ಟ್ರೇಲಿಯಾ ವಿರುದ್ಧದ ಪಿಂಕ್ಬಾಲ್ (ಹಗಲು-ರಾತ್ರಿ) ಟೆಸ್ಟ್ಗಾಗಿ ಸಿದ್ಧತೆ ನಡೆಸುತ್ತಿರುವ ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದೆ.
ಆಸ್ಟ್ರೇಲಿಯಾ ಪ್ರೈಮ್ ಮಿನಿಸ್ಟರ್ಸ್ ಇಲವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡರು. ಇನ್ನಿಂಗ್ಸ್ ಆರಂಭಿಸಿದ ಅತಿಥೇಯ ಆಸ್ಟ್ರೇಲಿಯಾಗೆ ಮಹಮ್ಮದ್ ಸಿರಾಜ್ ಆರಂಭದಲ್ಲೇ ಅಘಾತ ನೀಡಿದ್ದಾರೆ.
ಸ್ಯಾಮ್ ಕಾನ್ಸ್ಟಾಸ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಮ್ಯಾಟ್ ರೆನ್ಶಾ ಕೇವಲ 5 ರನ್ ಗಳಿಸಿ ಮೊಹಮ್ಮದ್ ಸಿರಾಜ್ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಜೇಡನ್ ಗುಡ್ವಿನ್ 4 ರನ್, ಆಕಾಶ್ ದೀಪ್ ಬೌಲಿಂಗ್ನಲ್ಲಿ ಪೆವಿಲಿಯನ್ ಹಾದಿ ಹಿಡಿದರು.
5.3 ಓವರ್ಗಳಾಗಿದ್ದಾಗ ಮಳೆ ಸುರಿದ ಕಾರಣ, ಪಂದ್ಯ ಕೆಲ ಹೊತ್ತು ನಿಂತಿತ್ತು. ನಂತರ ಪುನಃ ಇನ್ನಿಂಗ್ಸ್ ಆರಂಭಿಸಿದ ಅಸ್ಟ್ರೇಲಿಯಾ ತಂಡವು ದಿನದ ಅಂತ್ಯಕ್ಕೆ 7 ಓವರ್ಗಳಲ್ಲಿ 2 ವಿಕೆಟ್ಗೆ 22ರನ್ ಗಳಿಸಿದೆ.
ಪಂದ್ಯ ಆರಂಭವಾಗುವ ಮೊದಲೇ ಸಂಪೂರ್ಣವಾಗಿ ಮಳೆ ಸುರಿದ ಕಾರಣ ಮೊದಲ ದಿನದ ಆಟ ರದ್ದಾಗಿತ್ತು. ಹೀಗಾಗಿ, ಇಂದು 50 ಓವರ್ಗಳಿಗೆ ಮಾತ್ರ ಪಂದ್ಯ ನಡೆಯುತ್ತಿದೆ. ಅತಿಥೇಯ ಆಸ್ಟ್ರೇಲಿಯಾ ತಂಡವನ್ನು ಜಾಕ್ ಎಡ್ವರ್ಡ್ಸ್ ಮುನ್ನಡೆಸುತ್ತಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…