ಕ್ಯಾನ್ಬೆರಾ: ಆಸ್ಟ್ರೇಲಿಯಾ ವಿರುದ್ಧದ ಪಿಂಕ್ಬಾಲ್ (ಹಗಲು-ರಾತ್ರಿ) ಟೆಸ್ಟ್ಗಾಗಿ ಸಿದ್ಧತೆ ನಡೆಸುತ್ತಿರುವ ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದೆ.
ಆಸ್ಟ್ರೇಲಿಯಾ ಪ್ರೈಮ್ ಮಿನಿಸ್ಟರ್ಸ್ ಇಲವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡರು. ಇನ್ನಿಂಗ್ಸ್ ಆರಂಭಿಸಿದ ಅತಿಥೇಯ ಆಸ್ಟ್ರೇಲಿಯಾಗೆ ಮಹಮ್ಮದ್ ಸಿರಾಜ್ ಆರಂಭದಲ್ಲೇ ಅಘಾತ ನೀಡಿದ್ದಾರೆ.
ಸ್ಯಾಮ್ ಕಾನ್ಸ್ಟಾಸ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಮ್ಯಾಟ್ ರೆನ್ಶಾ ಕೇವಲ 5 ರನ್ ಗಳಿಸಿ ಮೊಹಮ್ಮದ್ ಸಿರಾಜ್ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಜೇಡನ್ ಗುಡ್ವಿನ್ 4 ರನ್, ಆಕಾಶ್ ದೀಪ್ ಬೌಲಿಂಗ್ನಲ್ಲಿ ಪೆವಿಲಿಯನ್ ಹಾದಿ ಹಿಡಿದರು.
5.3 ಓವರ್ಗಳಾಗಿದ್ದಾಗ ಮಳೆ ಸುರಿದ ಕಾರಣ, ಪಂದ್ಯ ಕೆಲ ಹೊತ್ತು ನಿಂತಿತ್ತು. ನಂತರ ಪುನಃ ಇನ್ನಿಂಗ್ಸ್ ಆರಂಭಿಸಿದ ಅಸ್ಟ್ರೇಲಿಯಾ ತಂಡವು ದಿನದ ಅಂತ್ಯಕ್ಕೆ 7 ಓವರ್ಗಳಲ್ಲಿ 2 ವಿಕೆಟ್ಗೆ 22ರನ್ ಗಳಿಸಿದೆ.
ಪಂದ್ಯ ಆರಂಭವಾಗುವ ಮೊದಲೇ ಸಂಪೂರ್ಣವಾಗಿ ಮಳೆ ಸುರಿದ ಕಾರಣ ಮೊದಲ ದಿನದ ಆಟ ರದ್ದಾಗಿತ್ತು. ಹೀಗಾಗಿ, ಇಂದು 50 ಓವರ್ಗಳಿಗೆ ಮಾತ್ರ ಪಂದ್ಯ ನಡೆಯುತ್ತಿದೆ. ಅತಿಥೇಯ ಆಸ್ಟ್ರೇಲಿಯಾ ತಂಡವನ್ನು ಜಾಕ್ ಎಡ್ವರ್ಡ್ಸ್ ಮುನ್ನಡೆಸುತ್ತಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…