ಕ್ಯಾನ್ಬೆರಾ: ಆಸ್ಟ್ರೇಲಿಯಾ ವಿರುದ್ಧದ ಪಿಂಕ್ಬಾಲ್ (ಹಗಲು-ರಾತ್ರಿ) ಟೆಸ್ಟ್ಗಾಗಿ ಸಿದ್ಧತೆ ನಡೆಸುತ್ತಿರುವ ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದೆ.
ಆಸ್ಟ್ರೇಲಿಯಾ ಪ್ರೈಮ್ ಮಿನಿಸ್ಟರ್ಸ್ ಇಲವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡರು. ಇನ್ನಿಂಗ್ಸ್ ಆರಂಭಿಸಿದ ಅತಿಥೇಯ ಆಸ್ಟ್ರೇಲಿಯಾಗೆ ಮಹಮ್ಮದ್ ಸಿರಾಜ್ ಆರಂಭದಲ್ಲೇ ಅಘಾತ ನೀಡಿದ್ದಾರೆ.
ಸ್ಯಾಮ್ ಕಾನ್ಸ್ಟಾಸ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಮ್ಯಾಟ್ ರೆನ್ಶಾ ಕೇವಲ 5 ರನ್ ಗಳಿಸಿ ಮೊಹಮ್ಮದ್ ಸಿರಾಜ್ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಜೇಡನ್ ಗುಡ್ವಿನ್ 4 ರನ್, ಆಕಾಶ್ ದೀಪ್ ಬೌಲಿಂಗ್ನಲ್ಲಿ ಪೆವಿಲಿಯನ್ ಹಾದಿ ಹಿಡಿದರು.
5.3 ಓವರ್ಗಳಾಗಿದ್ದಾಗ ಮಳೆ ಸುರಿದ ಕಾರಣ, ಪಂದ್ಯ ಕೆಲ ಹೊತ್ತು ನಿಂತಿತ್ತು. ನಂತರ ಪುನಃ ಇನ್ನಿಂಗ್ಸ್ ಆರಂಭಿಸಿದ ಅಸ್ಟ್ರೇಲಿಯಾ ತಂಡವು ದಿನದ ಅಂತ್ಯಕ್ಕೆ 7 ಓವರ್ಗಳಲ್ಲಿ 2 ವಿಕೆಟ್ಗೆ 22ರನ್ ಗಳಿಸಿದೆ.
ಪಂದ್ಯ ಆರಂಭವಾಗುವ ಮೊದಲೇ ಸಂಪೂರ್ಣವಾಗಿ ಮಳೆ ಸುರಿದ ಕಾರಣ ಮೊದಲ ದಿನದ ಆಟ ರದ್ದಾಗಿತ್ತು. ಹೀಗಾಗಿ, ಇಂದು 50 ಓವರ್ಗಳಿಗೆ ಮಾತ್ರ ಪಂದ್ಯ ನಡೆಯುತ್ತಿದೆ. ಅತಿಥೇಯ ಆಸ್ಟ್ರೇಲಿಯಾ ತಂಡವನ್ನು ಜಾಕ್ ಎಡ್ವರ್ಡ್ಸ್ ಮುನ್ನಡೆಸುತ್ತಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…