ಕ್ರೀಡೆ

ಬಾಕ್ಸಿಂಗ್‌ ಡೇ ಟೆಸ್ಟ್: ಮಿಂಚಿದ ಬೂಮ್ರಾ: ಕೊನೆಯಲ್ಲಿ ಕಾಡಿದ ಲಯನ್‌

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ 4ನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಸವಾಲಿನ ಮೊತ್ತ ಗಳಿಸಿದೆ.

ಕಡಿಮೆ ಮೊತ್ತಕ್ಕೆ ಕುಸಿಯುವ ಹಂತದಲ್ಲಿದ್ದ ಆಸ್ಟ್ರೇಲಿಯಾಗೆ ಕೊನೆಯಲ್ಲಿ ಬ್ಯಾಟರ್‌ಗಳಾದ ನಾಥನ್‌ ಲಿಯಾನ್‌ ಹಾಗೂ ಬೋಲ್ಯಾಂಡ್‌ ಅವರ ಆಟದ ನೆರವಿನಿಂದ 4ನೇ ದಿನದ ಅಂತ್ಯಕ್ಕೆ 9 ವಿಕೆಟ್‌ ಕಳೆದುಕೊಂಡು 228 ರನ್‌ ಗಳಿಸಿದೆ. ಇದರೊಂದಿಗೆ ಆಸ್ಟ್ರೇಲಿಯಾ 333 ರನ್‌ಗಳ ಮುನ್ನಡೆ ಸಾಧಿಸಿದೆ.

ಮೆಲ್ಬೋರ್ನ್‌ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅತಿಥೇಯ ತಂಡ ಸ್ಟೀವ್‌ ಸ್ಮಿತ್‌ 140(197) ಶತಕದ ನೆರವಿನಿಂದ 474 ರನ್‌ಗಳಿಸಿ ಆಲೌಟ್‌ ಆಗಿತ್ತು. ಇದಕ್ಕುತ್ತರವಾಗಿ ಇನ್ನಿಂಗ್ಸ್‌ ಆರಂಭಿಸಿದ ಭಾರತ ತಂಡ ನಿತೀಶ್‌ ಕುಮಾರ್ ರೆಡ್ಡಿ 114(189) ಅವರ ಶತಕದ ಹೊರತಾಗಿಯೂ 369 ರನ್‌ ಗಳಿಸಲಷ್ಟೇ ಶಕ್ತವಾಯಿತು.

105 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಭಾರತದ ವೇಗಿಗಳಾದ ಜಸ್ಪ್ರಿತ್‌ ಬುಮ್ರಾ ಹಾಗೂ ಮಹಮ್ಮದ್‌ ಸಿರಾಜ್‌ ಕಾಡತೊಡಗಿದರು.

ಕಳೆದ ಇನ್ನಿಂಗ್ಸ್‌ನಲ್ಲಿ ಅರ್ಧ ಶತಕ ಗಳಿಸಿದ್ದ ಆಸೀಸ್‌ನ ಆರಂಭಿಕ ಬ್ಯಾಟರ್‌ ಸ್ಯಾಮ್‌ ಕೋನ್‌ಸ್ಟಾಸ್‌ 8(18) ಅವರನ್ನು ಬುಮ್ರಾ ಬೌಲ್ಡ್‌ ಮಾಡುವ ಮೂಲಕ ಆರಂಭಿಕ ಆಘಾತ ನೀಡಿದರು. ನಂತರ ಉಸ್ಮಾನ್‌ ಖ್ವಾಜಾ 21(65) ಕೂಡ ಸಿರಾಜ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು.

ಇವರ ನಂತರ ಬಂದ ಬ್ಯಾಟರ್‌ಗಳು ಸ್ಟೀವ್‌ ಸ್ಮಿತ್‌ 13(41), ಟ್ರಾವಿಸ್‌ ಹೆಡ್‌ 1(2), ಮಿಚೆಲ್‌ ಮಾರ್ಷ್‌ 0(4), ಹಾಗೂ ಅಲೆಕ್ಸ್‌ ಕ್ಯಾರಿ 2(7) ಬಂದ ದಾರಿಗೆ ಸುಂಕವಿಲ್ಲದಂತೆ ಪವಿಲಿಯನ್‌ ಪೆರೇಡ್‌ ನಡೆಸಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಇನ್ನೊಂದೆಡೆ ನೆಲಕಚ್ಚಿ ಆಡಿದ ಮಾರ್ನಸ್‌ ಲಾಬುಶೇನ್‌ 7ನೇ ವಿಕೆಟ್‌ಗೆ ಕಮಿನ್ಸ್‌ ಜೊತೆಯಲ್ಲಿ 57(116) ಅರ್ಧಶತಕದ ಜೊತೆಯಾಟ ಆಡಿ ಸ್ವಲ್ಪ ಚೇತರಿಕೆ ನೀಡಿದರು.

ಮಾರ್ನಸ್‌ 70(139) ರನ್‌ಗಳಿಸಿ ಆಡುತ್ತಿದ್ದಾಗ ಸಿರಾಜ್‌ ಬೌಲಿಂಗ್‌ನಲ್ಲಿ ಎಲ್‌ಬಿ ಆದರು. ನಂತರ ಕಮಿನ್ಸ್‌ 40(90) ರನ್‌ಗಳಿಸಿ ಜಡೇಜಾಗೆ ವಿಕೆಟ್‌ ಒಪ್ಪಿಸಿದರು.

ಆಸ್ಟ್ರೇಲಿಯಾದ ಇನ್ನಿಂಗ್ಸ್‌ ಮುಗಿಸಿ ತಮ್ಮ ಇನ್ನಿಂಗ್ಸ್‌ ಬೇಗ ಆರಂಭಿಸುವ ಯೋಚನೆಯಲ್ಲಿದ್ದ ಭಾರತಕ್ಕೆ ಕೊನೆಯಲ್ಲಿ ನಾಥನ್‌ ಲಿಯಾನ್‌ ಹಾಗೂ ಸ್ಕಾಟ್‌ ಬೋಲ್ಯಾಂಡ್‌ ಕಾಡಿದರು. ಇಬ್ಬರು ಜೊತೆಯಾಗಿ ಅರ್ಧಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ಮೂನ್ನೂರರ ಗಡಿ ದಾಟಲು ನೆರವಾದರು.

ಒಟ್ಟಾರೆ ನಾಥನ್‌ ಲಿಯಾನ್‌ 41(54) ಮತ್ತು ಸ್ಕಾಟ್‌ ಬೋಲ್ಯಾಂಡ್‌ 10(65) ರನ್‌ ಬಾರಿಸಿ ನಾಟ್‌ಔಟ್‌ ಆಗುವ ಮೂಲಕ 5ನೇ ದಿನದಾಟ ಕಾಯ್ದುಕೊಂಡಿದ್ದಾರೆ.

ಇನ್ನು ಭಾರತ ಪರ ಬುಮ್ರಾ 4 ವಿಕೆಟ್‌ ಪಡೆದರೆ, ಸಿರಾಜ್‌ 3 ವಿಕೆಟ್‌ ಹಾಗೂ ಜಡೇಜಾ ಒಂದು ವಿಕೆಟ್‌ ಉರುಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

28 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

3 hours ago