ಕ್ರೀಡೆ

ಬಾಕ್ಸಿಂಗ್‌ ಡೇ ಟೆಸ್ಟ್: ಮಿಂಚಿದ ಬೂಮ್ರಾ: ಕೊನೆಯಲ್ಲಿ ಕಾಡಿದ ಲಯನ್‌

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ 4ನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಸವಾಲಿನ ಮೊತ್ತ ಗಳಿಸಿದೆ.

ಕಡಿಮೆ ಮೊತ್ತಕ್ಕೆ ಕುಸಿಯುವ ಹಂತದಲ್ಲಿದ್ದ ಆಸ್ಟ್ರೇಲಿಯಾಗೆ ಕೊನೆಯಲ್ಲಿ ಬ್ಯಾಟರ್‌ಗಳಾದ ನಾಥನ್‌ ಲಿಯಾನ್‌ ಹಾಗೂ ಬೋಲ್ಯಾಂಡ್‌ ಅವರ ಆಟದ ನೆರವಿನಿಂದ 4ನೇ ದಿನದ ಅಂತ್ಯಕ್ಕೆ 9 ವಿಕೆಟ್‌ ಕಳೆದುಕೊಂಡು 228 ರನ್‌ ಗಳಿಸಿದೆ. ಇದರೊಂದಿಗೆ ಆಸ್ಟ್ರೇಲಿಯಾ 333 ರನ್‌ಗಳ ಮುನ್ನಡೆ ಸಾಧಿಸಿದೆ.

ಮೆಲ್ಬೋರ್ನ್‌ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅತಿಥೇಯ ತಂಡ ಸ್ಟೀವ್‌ ಸ್ಮಿತ್‌ 140(197) ಶತಕದ ನೆರವಿನಿಂದ 474 ರನ್‌ಗಳಿಸಿ ಆಲೌಟ್‌ ಆಗಿತ್ತು. ಇದಕ್ಕುತ್ತರವಾಗಿ ಇನ್ನಿಂಗ್ಸ್‌ ಆರಂಭಿಸಿದ ಭಾರತ ತಂಡ ನಿತೀಶ್‌ ಕುಮಾರ್ ರೆಡ್ಡಿ 114(189) ಅವರ ಶತಕದ ಹೊರತಾಗಿಯೂ 369 ರನ್‌ ಗಳಿಸಲಷ್ಟೇ ಶಕ್ತವಾಯಿತು.

105 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಭಾರತದ ವೇಗಿಗಳಾದ ಜಸ್ಪ್ರಿತ್‌ ಬುಮ್ರಾ ಹಾಗೂ ಮಹಮ್ಮದ್‌ ಸಿರಾಜ್‌ ಕಾಡತೊಡಗಿದರು.

ಕಳೆದ ಇನ್ನಿಂಗ್ಸ್‌ನಲ್ಲಿ ಅರ್ಧ ಶತಕ ಗಳಿಸಿದ್ದ ಆಸೀಸ್‌ನ ಆರಂಭಿಕ ಬ್ಯಾಟರ್‌ ಸ್ಯಾಮ್‌ ಕೋನ್‌ಸ್ಟಾಸ್‌ 8(18) ಅವರನ್ನು ಬುಮ್ರಾ ಬೌಲ್ಡ್‌ ಮಾಡುವ ಮೂಲಕ ಆರಂಭಿಕ ಆಘಾತ ನೀಡಿದರು. ನಂತರ ಉಸ್ಮಾನ್‌ ಖ್ವಾಜಾ 21(65) ಕೂಡ ಸಿರಾಜ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು.

ಇವರ ನಂತರ ಬಂದ ಬ್ಯಾಟರ್‌ಗಳು ಸ್ಟೀವ್‌ ಸ್ಮಿತ್‌ 13(41), ಟ್ರಾವಿಸ್‌ ಹೆಡ್‌ 1(2), ಮಿಚೆಲ್‌ ಮಾರ್ಷ್‌ 0(4), ಹಾಗೂ ಅಲೆಕ್ಸ್‌ ಕ್ಯಾರಿ 2(7) ಬಂದ ದಾರಿಗೆ ಸುಂಕವಿಲ್ಲದಂತೆ ಪವಿಲಿಯನ್‌ ಪೆರೇಡ್‌ ನಡೆಸಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಇನ್ನೊಂದೆಡೆ ನೆಲಕಚ್ಚಿ ಆಡಿದ ಮಾರ್ನಸ್‌ ಲಾಬುಶೇನ್‌ 7ನೇ ವಿಕೆಟ್‌ಗೆ ಕಮಿನ್ಸ್‌ ಜೊತೆಯಲ್ಲಿ 57(116) ಅರ್ಧಶತಕದ ಜೊತೆಯಾಟ ಆಡಿ ಸ್ವಲ್ಪ ಚೇತರಿಕೆ ನೀಡಿದರು.

ಮಾರ್ನಸ್‌ 70(139) ರನ್‌ಗಳಿಸಿ ಆಡುತ್ತಿದ್ದಾಗ ಸಿರಾಜ್‌ ಬೌಲಿಂಗ್‌ನಲ್ಲಿ ಎಲ್‌ಬಿ ಆದರು. ನಂತರ ಕಮಿನ್ಸ್‌ 40(90) ರನ್‌ಗಳಿಸಿ ಜಡೇಜಾಗೆ ವಿಕೆಟ್‌ ಒಪ್ಪಿಸಿದರು.

ಆಸ್ಟ್ರೇಲಿಯಾದ ಇನ್ನಿಂಗ್ಸ್‌ ಮುಗಿಸಿ ತಮ್ಮ ಇನ್ನಿಂಗ್ಸ್‌ ಬೇಗ ಆರಂಭಿಸುವ ಯೋಚನೆಯಲ್ಲಿದ್ದ ಭಾರತಕ್ಕೆ ಕೊನೆಯಲ್ಲಿ ನಾಥನ್‌ ಲಿಯಾನ್‌ ಹಾಗೂ ಸ್ಕಾಟ್‌ ಬೋಲ್ಯಾಂಡ್‌ ಕಾಡಿದರು. ಇಬ್ಬರು ಜೊತೆಯಾಗಿ ಅರ್ಧಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ಮೂನ್ನೂರರ ಗಡಿ ದಾಟಲು ನೆರವಾದರು.

ಒಟ್ಟಾರೆ ನಾಥನ್‌ ಲಿಯಾನ್‌ 41(54) ಮತ್ತು ಸ್ಕಾಟ್‌ ಬೋಲ್ಯಾಂಡ್‌ 10(65) ರನ್‌ ಬಾರಿಸಿ ನಾಟ್‌ಔಟ್‌ ಆಗುವ ಮೂಲಕ 5ನೇ ದಿನದಾಟ ಕಾಯ್ದುಕೊಂಡಿದ್ದಾರೆ.

ಇನ್ನು ಭಾರತ ಪರ ಬುಮ್ರಾ 4 ವಿಕೆಟ್‌ ಪಡೆದರೆ, ಸಿರಾಜ್‌ 3 ವಿಕೆಟ್‌ ಹಾಗೂ ಜಡೇಜಾ ಒಂದು ವಿಕೆಟ್‌ ಉರುಳಿಸಿದರು.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

2 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

2 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

2 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

2 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

2 hours ago