ಕ್ರೀಡೆ

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬುಮ್ರಾ

ಇಂಡಿಯನ್‌ ಕ್ರಿಕೆಟ್‌ ಟೀಮ್‌ ನ ಆಟಗಾರ ಜಸ್ಪ್ರೀತ್‌ ಬುಮ್ರಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಇಂಡಿಯನ್‌ ಕ್ರೀಟ್‌ ಟೀಮ್ ನ ಸ್ಫೊಟಕ ಬೌಲರ್‌ ಬುಮ್ರಾ ಇಂದು ತಮ್ಮ 30 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಬುಮ್ರಾ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಾಗೂ ಟೀ ಇಂಡಿಯಾ ಮಾತ್ರವಲ್ಲದೇ ವಿಶ್ವ ಕ್ರಿಕೇಟ್‌ ನಲ್ಲಿಯೂ ಸಹ ಹೆಸರು ಮಾಡಿದ್ದಾರೆ.

ಅತೀ ಕಡಿಮೆ ಅವಧಿಯಲ್ಲಿ ಇಂಡಿಯನ್‌ ಟೀಮ್‌ ನ ಪ್ರಮುಖ ಬೌಲರ್‌ ಆಗಿ ಗುರುತಿಸಿಕೊಂಡ ಬುಮ್ರಾ ಇತ್ತೀಚೆಗೆ ನಡೆದ ಏಕದಿನ ವಿಶ್ವ ಕಪ್‌ ನಲ್ಲಿ 11 ಪಂದ್ಯಗಳನ್ನಾಡಿ 20 ವಿಕೆಟ್‌ ಗಳಿಸಿದ್ದರು. ಅಂತೆಯೇ ಭಾರತವನ್ನು ಫೈನಲ್‌ ವರೆಗೆ ಕೊಂಡೊಯ್ಯುವುದರಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ತಮ್ಮ ಅತ್ಯುತ್ತಮ ಬೌಲಿಂಗ್‌ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಬುಮ್ರಾ, ಭಾರತ ಕ್ರಿಕೆಟ್‌ ಇತಿಹಾಸದಲ್ಲಿ ಹ್ಯಾಟ್ರಿಕ್‌ ವಿಕೆಟ್‌ ಪಡೆದ ಮೂರನೆ ಆಟಗಾರನಾಗಿದ್ದಾರೆ. 2019 ರಲ್ಲಿ ನಡೆದ ವೆಸ್ಟ್‌ ಇಂಡೀಸ್‌ ಪ್ರವಾಸದ ಸಮಯದಲ್ಲಿ ಜಮೈಕಾ ಮೈದಾನದಲ್ಲಿ ನಡೆದ ಸರಣಿಯ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಜಸ್ಪ್ರೀತ್‌ ಬುಮ್ರಾ ಈ ಸಾಧನೆಯನ್ನು ಮುಡಿಗೇರಿಸಿಕೊಂಡಿದ್ದರು.

ಅದಷ್ಟೇ ಅಲ್ಲದೇ 2019ರಲ್ಲಿಯೇ ಮತ್ತೆ ಏಕದಿನ ಪಂದ್ಯದಲ್ಲಿ ತಮ್ಮ 100 ವಿಕೆಟ್‌ ಪೂರೈಸಿದ್ದರು. ಈ ಮೂಲಕ ಈ ಸಾಧನೆ ಮಾಡಿದ 21 ನೇ ಬೌಲರ್‌ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದರು.

ಬುಮ್ರಾ ಭಾರತೀಯ ಬೌಲರ್‌ ಆಗಿ ತಮ್ಮ ಟೆಸ್ಟ್‌ ನ ಮೊದಲ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್‌ ಗಳನ್ನು ಪಡೆಯುವ ಮೂಲಕ ನಂಬರ್‌ 1 ಸ್ಥಾನವನ್ನು ಪಡೆದುಕೊಂಡಿದ್ದರು.

2018 ರಲ್ಲಿ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಬುಮ್ರಾ ಅವರು 48 ಟೆಸ್ಟ್‌ ವಿಕೆಟ್‌ ಗಳನ್ನು ಪಡೆದಿದ್ದರು. ಈ ಮೂಲಕ ಟೀಂ ಇಂಡಿಯಾದ ಮಾಜಿ ಆಟಗಾರ ದಿಲೀಪ್‌ ದೋಷಿ ಅವರ ದಾಖಲೆ ಮುರಿದಿದ್ದರು.

lokesh

Recent Posts

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

6 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

21 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

37 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

1 hour ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

4 hours ago