ಕ್ರೀಡೆ

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬುಮ್ರಾ

ಇಂಡಿಯನ್‌ ಕ್ರಿಕೆಟ್‌ ಟೀಮ್‌ ನ ಆಟಗಾರ ಜಸ್ಪ್ರೀತ್‌ ಬುಮ್ರಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಇಂಡಿಯನ್‌ ಕ್ರೀಟ್‌ ಟೀಮ್ ನ ಸ್ಫೊಟಕ ಬೌಲರ್‌ ಬುಮ್ರಾ ಇಂದು ತಮ್ಮ 30 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಬುಮ್ರಾ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಾಗೂ ಟೀ ಇಂಡಿಯಾ ಮಾತ್ರವಲ್ಲದೇ ವಿಶ್ವ ಕ್ರಿಕೇಟ್‌ ನಲ್ಲಿಯೂ ಸಹ ಹೆಸರು ಮಾಡಿದ್ದಾರೆ.

ಅತೀ ಕಡಿಮೆ ಅವಧಿಯಲ್ಲಿ ಇಂಡಿಯನ್‌ ಟೀಮ್‌ ನ ಪ್ರಮುಖ ಬೌಲರ್‌ ಆಗಿ ಗುರುತಿಸಿಕೊಂಡ ಬುಮ್ರಾ ಇತ್ತೀಚೆಗೆ ನಡೆದ ಏಕದಿನ ವಿಶ್ವ ಕಪ್‌ ನಲ್ಲಿ 11 ಪಂದ್ಯಗಳನ್ನಾಡಿ 20 ವಿಕೆಟ್‌ ಗಳಿಸಿದ್ದರು. ಅಂತೆಯೇ ಭಾರತವನ್ನು ಫೈನಲ್‌ ವರೆಗೆ ಕೊಂಡೊಯ್ಯುವುದರಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ತಮ್ಮ ಅತ್ಯುತ್ತಮ ಬೌಲಿಂಗ್‌ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಬುಮ್ರಾ, ಭಾರತ ಕ್ರಿಕೆಟ್‌ ಇತಿಹಾಸದಲ್ಲಿ ಹ್ಯಾಟ್ರಿಕ್‌ ವಿಕೆಟ್‌ ಪಡೆದ ಮೂರನೆ ಆಟಗಾರನಾಗಿದ್ದಾರೆ. 2019 ರಲ್ಲಿ ನಡೆದ ವೆಸ್ಟ್‌ ಇಂಡೀಸ್‌ ಪ್ರವಾಸದ ಸಮಯದಲ್ಲಿ ಜಮೈಕಾ ಮೈದಾನದಲ್ಲಿ ನಡೆದ ಸರಣಿಯ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಜಸ್ಪ್ರೀತ್‌ ಬುಮ್ರಾ ಈ ಸಾಧನೆಯನ್ನು ಮುಡಿಗೇರಿಸಿಕೊಂಡಿದ್ದರು.

ಅದಷ್ಟೇ ಅಲ್ಲದೇ 2019ರಲ್ಲಿಯೇ ಮತ್ತೆ ಏಕದಿನ ಪಂದ್ಯದಲ್ಲಿ ತಮ್ಮ 100 ವಿಕೆಟ್‌ ಪೂರೈಸಿದ್ದರು. ಈ ಮೂಲಕ ಈ ಸಾಧನೆ ಮಾಡಿದ 21 ನೇ ಬೌಲರ್‌ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದರು.

ಬುಮ್ರಾ ಭಾರತೀಯ ಬೌಲರ್‌ ಆಗಿ ತಮ್ಮ ಟೆಸ್ಟ್‌ ನ ಮೊದಲ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್‌ ಗಳನ್ನು ಪಡೆಯುವ ಮೂಲಕ ನಂಬರ್‌ 1 ಸ್ಥಾನವನ್ನು ಪಡೆದುಕೊಂಡಿದ್ದರು.

2018 ರಲ್ಲಿ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಬುಮ್ರಾ ಅವರು 48 ಟೆಸ್ಟ್‌ ವಿಕೆಟ್‌ ಗಳನ್ನು ಪಡೆದಿದ್ದರು. ಈ ಮೂಲಕ ಟೀಂ ಇಂಡಿಯಾದ ಮಾಜಿ ಆಟಗಾರ ದಿಲೀಪ್‌ ದೋಷಿ ಅವರ ದಾಖಲೆ ಮುರಿದಿದ್ದರು.

lokesh

Recent Posts

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

5 mins ago

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

2 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

4 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

4 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

5 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

5 hours ago