ಕ್ರೀಡೆ

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬುಮ್ರಾ

ಇಂಡಿಯನ್‌ ಕ್ರಿಕೆಟ್‌ ಟೀಮ್‌ ನ ಆಟಗಾರ ಜಸ್ಪ್ರೀತ್‌ ಬುಮ್ರಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಇಂಡಿಯನ್‌ ಕ್ರೀಟ್‌ ಟೀಮ್ ನ ಸ್ಫೊಟಕ ಬೌಲರ್‌ ಬುಮ್ರಾ ಇಂದು ತಮ್ಮ 30 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಬುಮ್ರಾ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಾಗೂ ಟೀ ಇಂಡಿಯಾ ಮಾತ್ರವಲ್ಲದೇ ವಿಶ್ವ ಕ್ರಿಕೇಟ್‌ ನಲ್ಲಿಯೂ ಸಹ ಹೆಸರು ಮಾಡಿದ್ದಾರೆ.

ಅತೀ ಕಡಿಮೆ ಅವಧಿಯಲ್ಲಿ ಇಂಡಿಯನ್‌ ಟೀಮ್‌ ನ ಪ್ರಮುಖ ಬೌಲರ್‌ ಆಗಿ ಗುರುತಿಸಿಕೊಂಡ ಬುಮ್ರಾ ಇತ್ತೀಚೆಗೆ ನಡೆದ ಏಕದಿನ ವಿಶ್ವ ಕಪ್‌ ನಲ್ಲಿ 11 ಪಂದ್ಯಗಳನ್ನಾಡಿ 20 ವಿಕೆಟ್‌ ಗಳಿಸಿದ್ದರು. ಅಂತೆಯೇ ಭಾರತವನ್ನು ಫೈನಲ್‌ ವರೆಗೆ ಕೊಂಡೊಯ್ಯುವುದರಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ತಮ್ಮ ಅತ್ಯುತ್ತಮ ಬೌಲಿಂಗ್‌ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಬುಮ್ರಾ, ಭಾರತ ಕ್ರಿಕೆಟ್‌ ಇತಿಹಾಸದಲ್ಲಿ ಹ್ಯಾಟ್ರಿಕ್‌ ವಿಕೆಟ್‌ ಪಡೆದ ಮೂರನೆ ಆಟಗಾರನಾಗಿದ್ದಾರೆ. 2019 ರಲ್ಲಿ ನಡೆದ ವೆಸ್ಟ್‌ ಇಂಡೀಸ್‌ ಪ್ರವಾಸದ ಸಮಯದಲ್ಲಿ ಜಮೈಕಾ ಮೈದಾನದಲ್ಲಿ ನಡೆದ ಸರಣಿಯ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಜಸ್ಪ್ರೀತ್‌ ಬುಮ್ರಾ ಈ ಸಾಧನೆಯನ್ನು ಮುಡಿಗೇರಿಸಿಕೊಂಡಿದ್ದರು.

ಅದಷ್ಟೇ ಅಲ್ಲದೇ 2019ರಲ್ಲಿಯೇ ಮತ್ತೆ ಏಕದಿನ ಪಂದ್ಯದಲ್ಲಿ ತಮ್ಮ 100 ವಿಕೆಟ್‌ ಪೂರೈಸಿದ್ದರು. ಈ ಮೂಲಕ ಈ ಸಾಧನೆ ಮಾಡಿದ 21 ನೇ ಬೌಲರ್‌ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದರು.

ಬುಮ್ರಾ ಭಾರತೀಯ ಬೌಲರ್‌ ಆಗಿ ತಮ್ಮ ಟೆಸ್ಟ್‌ ನ ಮೊದಲ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್‌ ಗಳನ್ನು ಪಡೆಯುವ ಮೂಲಕ ನಂಬರ್‌ 1 ಸ್ಥಾನವನ್ನು ಪಡೆದುಕೊಂಡಿದ್ದರು.

2018 ರಲ್ಲಿ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಬುಮ್ರಾ ಅವರು 48 ಟೆಸ್ಟ್‌ ವಿಕೆಟ್‌ ಗಳನ್ನು ಪಡೆದಿದ್ದರು. ಈ ಮೂಲಕ ಟೀಂ ಇಂಡಿಯಾದ ಮಾಜಿ ಆಟಗಾರ ದಿಲೀಪ್‌ ದೋಷಿ ಅವರ ದಾಖಲೆ ಮುರಿದಿದ್ದರು.

lokesh

Recent Posts

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

41 mins ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

3 hours ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

3 hours ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

5 hours ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

7 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

8 hours ago