ಕ್ರೀಡೆ

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬುಮ್ರಾ

ಇಂಡಿಯನ್‌ ಕ್ರಿಕೆಟ್‌ ಟೀಮ್‌ ನ ಆಟಗಾರ ಜಸ್ಪ್ರೀತ್‌ ಬುಮ್ರಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಇಂಡಿಯನ್‌ ಕ್ರೀಟ್‌ ಟೀಮ್ ನ ಸ್ಫೊಟಕ ಬೌಲರ್‌ ಬುಮ್ರಾ ಇಂದು ತಮ್ಮ 30 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಬುಮ್ರಾ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಾಗೂ ಟೀ ಇಂಡಿಯಾ ಮಾತ್ರವಲ್ಲದೇ ವಿಶ್ವ ಕ್ರಿಕೇಟ್‌ ನಲ್ಲಿಯೂ ಸಹ ಹೆಸರು ಮಾಡಿದ್ದಾರೆ.

ಅತೀ ಕಡಿಮೆ ಅವಧಿಯಲ್ಲಿ ಇಂಡಿಯನ್‌ ಟೀಮ್‌ ನ ಪ್ರಮುಖ ಬೌಲರ್‌ ಆಗಿ ಗುರುತಿಸಿಕೊಂಡ ಬುಮ್ರಾ ಇತ್ತೀಚೆಗೆ ನಡೆದ ಏಕದಿನ ವಿಶ್ವ ಕಪ್‌ ನಲ್ಲಿ 11 ಪಂದ್ಯಗಳನ್ನಾಡಿ 20 ವಿಕೆಟ್‌ ಗಳಿಸಿದ್ದರು. ಅಂತೆಯೇ ಭಾರತವನ್ನು ಫೈನಲ್‌ ವರೆಗೆ ಕೊಂಡೊಯ್ಯುವುದರಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ತಮ್ಮ ಅತ್ಯುತ್ತಮ ಬೌಲಿಂಗ್‌ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಬುಮ್ರಾ, ಭಾರತ ಕ್ರಿಕೆಟ್‌ ಇತಿಹಾಸದಲ್ಲಿ ಹ್ಯಾಟ್ರಿಕ್‌ ವಿಕೆಟ್‌ ಪಡೆದ ಮೂರನೆ ಆಟಗಾರನಾಗಿದ್ದಾರೆ. 2019 ರಲ್ಲಿ ನಡೆದ ವೆಸ್ಟ್‌ ಇಂಡೀಸ್‌ ಪ್ರವಾಸದ ಸಮಯದಲ್ಲಿ ಜಮೈಕಾ ಮೈದಾನದಲ್ಲಿ ನಡೆದ ಸರಣಿಯ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಜಸ್ಪ್ರೀತ್‌ ಬುಮ್ರಾ ಈ ಸಾಧನೆಯನ್ನು ಮುಡಿಗೇರಿಸಿಕೊಂಡಿದ್ದರು.

ಅದಷ್ಟೇ ಅಲ್ಲದೇ 2019ರಲ್ಲಿಯೇ ಮತ್ತೆ ಏಕದಿನ ಪಂದ್ಯದಲ್ಲಿ ತಮ್ಮ 100 ವಿಕೆಟ್‌ ಪೂರೈಸಿದ್ದರು. ಈ ಮೂಲಕ ಈ ಸಾಧನೆ ಮಾಡಿದ 21 ನೇ ಬೌಲರ್‌ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದರು.

ಬುಮ್ರಾ ಭಾರತೀಯ ಬೌಲರ್‌ ಆಗಿ ತಮ್ಮ ಟೆಸ್ಟ್‌ ನ ಮೊದಲ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್‌ ಗಳನ್ನು ಪಡೆಯುವ ಮೂಲಕ ನಂಬರ್‌ 1 ಸ್ಥಾನವನ್ನು ಪಡೆದುಕೊಂಡಿದ್ದರು.

2018 ರಲ್ಲಿ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಬುಮ್ರಾ ಅವರು 48 ಟೆಸ್ಟ್‌ ವಿಕೆಟ್‌ ಗಳನ್ನು ಪಡೆದಿದ್ದರು. ಈ ಮೂಲಕ ಟೀಂ ಇಂಡಿಯಾದ ಮಾಜಿ ಆಟಗಾರ ದಿಲೀಪ್‌ ದೋಷಿ ಅವರ ದಾಖಲೆ ಮುರಿದಿದ್ದರು.

lokesh

Recent Posts

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

4 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

4 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

4 hours ago

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ…

4 hours ago

ಓದುಗರ ಪತ್ರ: ಪರೀಕ್ಷಾ ಶುಲ್ಕ ಗೊಂದಲ

ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ…

4 hours ago

ಮಮ ಡೇಟಾ: ಆಧಾರ್ ಕುರಿತ ಆತಂಕಗಳು

ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ…

4 hours ago