ಕ್ರೀಡೆ

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬುಮ್ರಾ

ಇಂಡಿಯನ್‌ ಕ್ರಿಕೆಟ್‌ ಟೀಮ್‌ ನ ಆಟಗಾರ ಜಸ್ಪ್ರೀತ್‌ ಬುಮ್ರಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಇಂಡಿಯನ್‌ ಕ್ರೀಟ್‌ ಟೀಮ್ ನ ಸ್ಫೊಟಕ ಬೌಲರ್‌ ಬುಮ್ರಾ ಇಂದು ತಮ್ಮ 30 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಬುಮ್ರಾ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಾಗೂ ಟೀ ಇಂಡಿಯಾ ಮಾತ್ರವಲ್ಲದೇ ವಿಶ್ವ ಕ್ರಿಕೇಟ್‌ ನಲ್ಲಿಯೂ ಸಹ ಹೆಸರು ಮಾಡಿದ್ದಾರೆ.

ಅತೀ ಕಡಿಮೆ ಅವಧಿಯಲ್ಲಿ ಇಂಡಿಯನ್‌ ಟೀಮ್‌ ನ ಪ್ರಮುಖ ಬೌಲರ್‌ ಆಗಿ ಗುರುತಿಸಿಕೊಂಡ ಬುಮ್ರಾ ಇತ್ತೀಚೆಗೆ ನಡೆದ ಏಕದಿನ ವಿಶ್ವ ಕಪ್‌ ನಲ್ಲಿ 11 ಪಂದ್ಯಗಳನ್ನಾಡಿ 20 ವಿಕೆಟ್‌ ಗಳಿಸಿದ್ದರು. ಅಂತೆಯೇ ಭಾರತವನ್ನು ಫೈನಲ್‌ ವರೆಗೆ ಕೊಂಡೊಯ್ಯುವುದರಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ತಮ್ಮ ಅತ್ಯುತ್ತಮ ಬೌಲಿಂಗ್‌ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಬುಮ್ರಾ, ಭಾರತ ಕ್ರಿಕೆಟ್‌ ಇತಿಹಾಸದಲ್ಲಿ ಹ್ಯಾಟ್ರಿಕ್‌ ವಿಕೆಟ್‌ ಪಡೆದ ಮೂರನೆ ಆಟಗಾರನಾಗಿದ್ದಾರೆ. 2019 ರಲ್ಲಿ ನಡೆದ ವೆಸ್ಟ್‌ ಇಂಡೀಸ್‌ ಪ್ರವಾಸದ ಸಮಯದಲ್ಲಿ ಜಮೈಕಾ ಮೈದಾನದಲ್ಲಿ ನಡೆದ ಸರಣಿಯ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಜಸ್ಪ್ರೀತ್‌ ಬುಮ್ರಾ ಈ ಸಾಧನೆಯನ್ನು ಮುಡಿಗೇರಿಸಿಕೊಂಡಿದ್ದರು.

ಅದಷ್ಟೇ ಅಲ್ಲದೇ 2019ರಲ್ಲಿಯೇ ಮತ್ತೆ ಏಕದಿನ ಪಂದ್ಯದಲ್ಲಿ ತಮ್ಮ 100 ವಿಕೆಟ್‌ ಪೂರೈಸಿದ್ದರು. ಈ ಮೂಲಕ ಈ ಸಾಧನೆ ಮಾಡಿದ 21 ನೇ ಬೌಲರ್‌ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದರು.

ಬುಮ್ರಾ ಭಾರತೀಯ ಬೌಲರ್‌ ಆಗಿ ತಮ್ಮ ಟೆಸ್ಟ್‌ ನ ಮೊದಲ ವರ್ಷದಲ್ಲಿ ಅತಿ ಹೆಚ್ಚು ವಿಕೆಟ್‌ ಗಳನ್ನು ಪಡೆಯುವ ಮೂಲಕ ನಂಬರ್‌ 1 ಸ್ಥಾನವನ್ನು ಪಡೆದುಕೊಂಡಿದ್ದರು.

2018 ರಲ್ಲಿ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಬುಮ್ರಾ ಅವರು 48 ಟೆಸ್ಟ್‌ ವಿಕೆಟ್‌ ಗಳನ್ನು ಪಡೆದಿದ್ದರು. ಈ ಮೂಲಕ ಟೀಂ ಇಂಡಿಯಾದ ಮಾಜಿ ಆಟಗಾರ ದಿಲೀಪ್‌ ದೋಷಿ ಅವರ ದಾಖಲೆ ಮುರಿದಿದ್ದರು.

lokesh

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

4 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

7 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

8 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

10 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

10 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

12 hours ago