ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡಕ್ಕೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸೇರಿಸಲಾಗಿದೆ. ಬೆನ್ನು ನೋವು ಮತ್ತು ಒತ್ತಡದ ಕಾರಣದಿಂದಾಗಿ ಕಳೆದ ಸೆಪ್ಟೆಂಬರ್ನಿಂದ ತಂಡದಿಂದ ಹೊರಗುಳಿದಿದ್ದರು. ಅಲ್ಲದೇ ಟಿ20 ವಿಶ್ವಕಪ್ಗೂ ಅಲಭ್ಯರಾಗಿದ್ದರು. ಅಂದಿನಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು, ಫಿಟ್ನೆಸ್ಗಾಗಿ ಶ್ರಮಿಸುತ್ತಿದ್ದರು.
ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆಯಲ್ಲಿ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಾಯವಾಗಿತ್ತು. ಢಾಕಾದಿಂದ ನೇರವಾಗಿ ಭಾರತಕ್ಕೆ ಬಂದಿದ್ದ ಶರ್ಮಾ ಚಿಕಿತ್ಸೆ ಪಡೆದಿದ್ದರು. ನಂತರದ ಪಂದ್ಯಗಳ ನಾಯಕತ್ವ ಕೆ.ಎಲ್.ರಾಹುಲ್ಗೆ ನೀಡಲಾಗಿತ್ತು. ಅವರು ಟೆಸ್ಟ್ ಸರಣಿಯನ್ನೂ ಮುನ್ನಡೆಸಿದ್ದರು. ಲಂಕಾ ವಿರುದ್ಧದ ಟಿ20ಗೆ ಹಾರ್ದಿಕ್ಗೆ ನಾಯಕತ್ವ ಹೊಣೆ ನೀಡಲಾಗಿದ್ದು, ಏಕದಿನ ಪಂದ್ಯಗಳಿಗೆ ಮತ್ತೆ ರೋಹಿತ್ ನಾಯಕತ್ವ ವಹಿಸಲಿದ್ದಾರೆ.16 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಡಿಸೆಂಬರ್ 27ರಂದು ಪ್ರಕಟಿಸಿತ್ತು. ನಂತರದಲ್ಲಿ ಬುಮ್ರಾ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯ ಗುವಾಹಟಿಯಲ್ಲಿ, ಎರಡನೇ ಪಂದ್ಯ ಕೋಲ್ಕತ್ತಾದ ಈಡನ್ಸ್ ಗಾರ್ಡನ್ ಮತ್ತು ಮೂರನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…