ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡಕ್ಕೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸೇರಿಸಲಾಗಿದೆ. ಬೆನ್ನು ನೋವು ಮತ್ತು ಒತ್ತಡದ ಕಾರಣದಿಂದಾಗಿ ಕಳೆದ ಸೆಪ್ಟೆಂಬರ್ನಿಂದ ತಂಡದಿಂದ ಹೊರಗುಳಿದಿದ್ದರು. ಅಲ್ಲದೇ ಟಿ20 ವಿಶ್ವಕಪ್ಗೂ ಅಲಭ್ಯರಾಗಿದ್ದರು. ಅಂದಿನಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು, ಫಿಟ್ನೆಸ್ಗಾಗಿ ಶ್ರಮಿಸುತ್ತಿದ್ದರು.
ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆಯಲ್ಲಿ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಾಯವಾಗಿತ್ತು. ಢಾಕಾದಿಂದ ನೇರವಾಗಿ ಭಾರತಕ್ಕೆ ಬಂದಿದ್ದ ಶರ್ಮಾ ಚಿಕಿತ್ಸೆ ಪಡೆದಿದ್ದರು. ನಂತರದ ಪಂದ್ಯಗಳ ನಾಯಕತ್ವ ಕೆ.ಎಲ್.ರಾಹುಲ್ಗೆ ನೀಡಲಾಗಿತ್ತು. ಅವರು ಟೆಸ್ಟ್ ಸರಣಿಯನ್ನೂ ಮುನ್ನಡೆಸಿದ್ದರು. ಲಂಕಾ ವಿರುದ್ಧದ ಟಿ20ಗೆ ಹಾರ್ದಿಕ್ಗೆ ನಾಯಕತ್ವ ಹೊಣೆ ನೀಡಲಾಗಿದ್ದು, ಏಕದಿನ ಪಂದ್ಯಗಳಿಗೆ ಮತ್ತೆ ರೋಹಿತ್ ನಾಯಕತ್ವ ವಹಿಸಲಿದ್ದಾರೆ.16 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಡಿಸೆಂಬರ್ 27ರಂದು ಪ್ರಕಟಿಸಿತ್ತು. ನಂತರದಲ್ಲಿ ಬುಮ್ರಾ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯ ಗುವಾಹಟಿಯಲ್ಲಿ, ಎರಡನೇ ಪಂದ್ಯ ಕೋಲ್ಕತ್ತಾದ ಈಡನ್ಸ್ ಗಾರ್ಡನ್ ಮತ್ತು ಮೂರನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…