ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡಕ್ಕೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸೇರಿಸಲಾಗಿದೆ. ಬೆನ್ನು ನೋವು ಮತ್ತು ಒತ್ತಡದ ಕಾರಣದಿಂದಾಗಿ ಕಳೆದ ಸೆಪ್ಟೆಂಬರ್ನಿಂದ ತಂಡದಿಂದ ಹೊರಗುಳಿದಿದ್ದರು. ಅಲ್ಲದೇ ಟಿ20 ವಿಶ್ವಕಪ್ಗೂ ಅಲಭ್ಯರಾಗಿದ್ದರು. ಅಂದಿನಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು, ಫಿಟ್ನೆಸ್ಗಾಗಿ ಶ್ರಮಿಸುತ್ತಿದ್ದರು.
ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆಯಲ್ಲಿ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಾಯವಾಗಿತ್ತು. ಢಾಕಾದಿಂದ ನೇರವಾಗಿ ಭಾರತಕ್ಕೆ ಬಂದಿದ್ದ ಶರ್ಮಾ ಚಿಕಿತ್ಸೆ ಪಡೆದಿದ್ದರು. ನಂತರದ ಪಂದ್ಯಗಳ ನಾಯಕತ್ವ ಕೆ.ಎಲ್.ರಾಹುಲ್ಗೆ ನೀಡಲಾಗಿತ್ತು. ಅವರು ಟೆಸ್ಟ್ ಸರಣಿಯನ್ನೂ ಮುನ್ನಡೆಸಿದ್ದರು. ಲಂಕಾ ವಿರುದ್ಧದ ಟಿ20ಗೆ ಹಾರ್ದಿಕ್ಗೆ ನಾಯಕತ್ವ ಹೊಣೆ ನೀಡಲಾಗಿದ್ದು, ಏಕದಿನ ಪಂದ್ಯಗಳಿಗೆ ಮತ್ತೆ ರೋಹಿತ್ ನಾಯಕತ್ವ ವಹಿಸಲಿದ್ದಾರೆ.16 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಡಿಸೆಂಬರ್ 27ರಂದು ಪ್ರಕಟಿಸಿತ್ತು. ನಂತರದಲ್ಲಿ ಬುಮ್ರಾ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯ ಗುವಾಹಟಿಯಲ್ಲಿ, ಎರಡನೇ ಪಂದ್ಯ ಕೋಲ್ಕತ್ತಾದ ಈಡನ್ಸ್ ಗಾರ್ಡನ್ ಮತ್ತು ಮೂರನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…