ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡಕ್ಕೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸೇರಿಸಲಾಗಿದೆ. ಬೆನ್ನು ನೋವು ಮತ್ತು ಒತ್ತಡದ ಕಾರಣದಿಂದಾಗಿ ಕಳೆದ ಸೆಪ್ಟೆಂಬರ್ನಿಂದ ತಂಡದಿಂದ ಹೊರಗುಳಿದಿದ್ದರು. ಅಲ್ಲದೇ ಟಿ20 ವಿಶ್ವಕಪ್ಗೂ ಅಲಭ್ಯರಾಗಿದ್ದರು. ಅಂದಿನಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು, ಫಿಟ್ನೆಸ್ಗಾಗಿ ಶ್ರಮಿಸುತ್ತಿದ್ದರು.
ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆಯಲ್ಲಿ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಾಯವಾಗಿತ್ತು. ಢಾಕಾದಿಂದ ನೇರವಾಗಿ ಭಾರತಕ್ಕೆ ಬಂದಿದ್ದ ಶರ್ಮಾ ಚಿಕಿತ್ಸೆ ಪಡೆದಿದ್ದರು. ನಂತರದ ಪಂದ್ಯಗಳ ನಾಯಕತ್ವ ಕೆ.ಎಲ್.ರಾಹುಲ್ಗೆ ನೀಡಲಾಗಿತ್ತು. ಅವರು ಟೆಸ್ಟ್ ಸರಣಿಯನ್ನೂ ಮುನ್ನಡೆಸಿದ್ದರು. ಲಂಕಾ ವಿರುದ್ಧದ ಟಿ20ಗೆ ಹಾರ್ದಿಕ್ಗೆ ನಾಯಕತ್ವ ಹೊಣೆ ನೀಡಲಾಗಿದ್ದು, ಏಕದಿನ ಪಂದ್ಯಗಳಿಗೆ ಮತ್ತೆ ರೋಹಿತ್ ನಾಯಕತ್ವ ವಹಿಸಲಿದ್ದಾರೆ.16 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಡಿಸೆಂಬರ್ 27ರಂದು ಪ್ರಕಟಿಸಿತ್ತು. ನಂತರದಲ್ಲಿ ಬುಮ್ರಾ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯ ಗುವಾಹಟಿಯಲ್ಲಿ, ಎರಡನೇ ಪಂದ್ಯ ಕೋಲ್ಕತ್ತಾದ ಈಡನ್ಸ್ ಗಾರ್ಡನ್ ಮತ್ತು ಮೂರನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…