ಕ್ರೀಡೆ

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಸೇರಿದ ಬುಮ್ರಾ

ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡಕ್ಕೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸೇರಿಸಲಾಗಿದೆ. ಬೆನ್ನು ನೋವು ಮತ್ತು ಒತ್ತಡದ ಕಾರಣದಿಂದಾಗಿ ಕಳೆದ ಸೆಪ್ಟೆಂಬರ್‌ನಿಂದ ತಂಡದಿಂದ ಹೊರಗುಳಿದಿದ್ದರು. ಅಲ್ಲದೇ ಟಿ20 ವಿಶ್ವಕಪ್​ಗೂ ಅಲಭ್ಯರಾಗಿದ್ದರು. ಅಂದಿನಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು, ಫಿಟ್​ನೆಸ್​ಗಾಗಿ ಶ್ರಮಿಸುತ್ತಿದ್ದರು.

ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆಯಲ್ಲಿ ರೋಹಿತ್​ ಶರ್ಮಾ ಹೆಬ್ಬೆರಳಿಗೆ ಗಾಯವಾಗಿತ್ತು. ಢಾಕಾದಿಂದ ನೇರವಾಗಿ ಭಾರತಕ್ಕೆ ಬಂದಿದ್ದ ಶರ್ಮಾ ಚಿಕಿತ್ಸೆ ಪಡೆದಿದ್ದರು. ನಂತರದ ಪಂದ್ಯಗಳ ನಾಯಕತ್ವ ಕೆ.ಎಲ್.ರಾಹುಲ್​ಗೆ ನೀಡಲಾಗಿತ್ತು. ಅವರು ಟೆಸ್ಟ್ ಸರಣಿಯನ್ನೂ ಮುನ್ನಡೆಸಿದ್ದರು. ಲಂಕಾ ವಿರುದ್ಧದ ಟಿ20ಗೆ ಹಾರ್ದಿಕ್​ಗೆ ನಾಯಕತ್ವ ಹೊಣೆ ನೀಡಲಾಗಿದ್ದು, ಏಕದಿನ ಪಂದ್ಯಗಳಿಗೆ ಮತ್ತೆ ರೋಹಿತ್ ನಾಯಕತ್ವ ವಹಿಸಲಿದ್ದಾರೆ.16 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಡಿಸೆಂಬರ್ 27ರಂದು ಪ್ರಕಟಿಸಿತ್ತು. ನಂತರದಲ್ಲಿ ಬುಮ್ರಾ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯ ಗುವಾಹಟಿಯಲ್ಲಿ, ಎರಡನೇ ಪಂದ್ಯ ಕೋಲ್ಕತ್ತಾದ ಈಡನ್ಸ್ ಗಾರ್ಡನ್‌ ಮತ್ತು ಮೂರನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago