ಪರ್ತ್: ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 46 ರನ್ಗಳ ಮುನ್ನಡೆ ಗಳಿಸಿದೆ.
ಟಾಸ್ ಗೆದ್ದ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ಇನ್ನಿಂಗ್ಸ್ನಲ್ಲಿ ಭಾರತ ತಂಡವು 150 ರನ್ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು, ನಿತೀಶ್ ರೆಡ್ಡಿ 41 ರನ್ ಗಳಿಸುವ ಮೂಲಕ ಭಾರತ ತಂಡಕ್ಕೆ ಆಸರೆಯಾದರು. ಆಸೀಸ್ ಪರ ಜೋಶ್ ಹ್ಯಾಜಲ್ವುಡ್ 4 ವಿಕೆಟ್ ಪಡೆದು ಮಿಂಚಿದರು.
ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ ಬುಮ್ರಾ ದಾಳಿಗೆ ಆರಂಭದಿಂದಲೇ ನಲುಗಿತು. ಮೊದಲ ದಿನದಾಂತ್ಯಕ್ಕೆ ಆಸ್ಟ್ರೇಲಿಯಾ ತಂಡವು 67 ರನ್ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಎರಡನೇ ದಿನದ ಆರಂಭದ ಸೆಸನ್ನಲ್ಲೇ ಆಸ್ಟ್ರೇಲಿಯಾ ತಂಡವು 51.2 ಓವರ್ಗಳಲ್ಲಿ 104 ರನ್ಗಳಿಗೆ ಆಲೌಟ್ ಆಗುವ ಮೂಲಕ ತನ್ನ ಮೊದಲ ಇನ್ನಿಂಗ್ಸ್ಗೆ ತೆರೆ ಎಳೆಯಿತು. ಭಾರತದ ಪರ ಬುಮ್ರಾ 5 ವಿಕೆಟ್ ಕಬಳಿಸಿದರೆ ಹರ್ಷೀತ್ ರಾಣಾ 3 ವಿಕೆಟ್, ಸಿರಾಜ್ 2 ವಿಕೆಟ್ ಕಬಳಿಸಿದರು.
ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡವು ವಿಕೆಟ್ ನಷ್ಟವಿಲ್ಲದೇ 87 ರನ್ಗಳಿಸಿ ತಮ್ಮ ಆಟವನ್ನು ಮುಂದುವರೆಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…