Categories: ಕ್ರೀಡೆ

ಆಸ್ಟ್ರೇಲಿಯಾಗೆ ಆಘಾತ ನೀಡಿದ ಬುಮ್ರಾ

ಪರ್ತ್‌: ಬಾರ್ಡರ್-‌ಗವಸ್ಕಾರ್‌ ಟ್ರೋಫಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 46 ರನ್‌ಗಳ ಮುನ್ನಡೆ ಗಳಿಸಿದೆ.

ಟಾಸ್‌ ಗೆದ್ದ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 150 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡಿತು, ನಿತೀಶ್‌ ರೆಡ್ಡಿ 41 ರನ್‌ ಗಳಿಸುವ ಮೂಲಕ ಭಾರತ ತಂಡಕ್ಕೆ ಆಸರೆಯಾದರು. ಆಸೀಸ್‌ ಪರ ಜೋಶ್‌ ಹ್ಯಾಜಲ್‌ವುಡ್‌ 4 ವಿಕೆಟ್‌ ಪಡೆದು ಮಿಂಚಿದರು.

ನಂತರ ಮೊದಲ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡ ಬುಮ್ರಾ ದಾಳಿಗೆ ಆರಂಭದಿಂದಲೇ ನಲುಗಿತು. ಮೊದಲ ದಿನದಾಂತ್ಯಕ್ಕೆ ಆಸ್ಟ್ರೇಲಿಯಾ ತಂಡವು 67 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಎರಡನೇ ದಿನದ ಆರಂಭದ ಸೆಸನ್‌ನಲ್ಲೇ ಆಸ್ಟ್ರೇಲಿಯಾ ತಂಡವು 51.2 ಓವರ್‌ಗಳಲ್ಲಿ 104 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ತನ್ನ ಮೊದಲ ಇನ್ನಿಂಗ್ಸ್‌ಗೆ ತೆರೆ ಎಳೆಯಿತು. ಭಾರತದ ಪರ ಬುಮ್ರಾ 5 ವಿಕೆಟ್‌ ಕಬಳಿಸಿದರೆ ಹರ್ಷೀತ್‌ ರಾಣಾ 3 ವಿಕೆಟ್‌, ಸಿರಾಜ್‌ 2 ವಿಕೆಟ್‌ ಕಬಳಿಸಿದರು.

ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ ತಂಡವು ವಿಕೆಟ್‌ ನಷ್ಟವಿಲ್ಲದೇ 87 ರನ್‌ಗಳಿಸಿ ತಮ್ಮ ಆಟವನ್ನು ಮುಂದುವರೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago