ಕ್ರೀಡೆ

ಇಂಡೋ-ಪಾಕ್‌ ಪಂದ್ಯ ರದ್ದು: ಏಶ್ಯನ್ ಕ್ರಿಕೆಟ್ ಕೌನ್ಸಿಲ್ ವಿರುದ್ಧ ಪಿಸಿಬಿ ಮಾಜಿ ಅಧ್ಯಕ್ಷ ಸೇಥಿ ವಾಗ್ದಾಳಿ

ಲಾಹೋರ್ : ಪಲ್ಲೆಕೆಲೆಯಲ್ಲಿ ಶನಿವಾರ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಏಶ್ಯಕಪ್ ಪಂದ್ಯವು ಮಳೆಯಿಂದಗಿ ರದ್ದಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಏಶ್ಯಕಪ್ನ ವೇಳಾಪಟ್ಟಿಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಏಶ್ಯನ್ ಕ್ರಿಕೆಟ್ ಕೌನ್ಸಿಲ್ನ ನಿರ್ಧಾರವನ್ನು ಟೀಕಿಸಿದ್ದಾರೆ.

ಶ್ರೀಲಂಕಾವನ್ನು ಸಹ ಆತಿಥ್ಯ ದೇಶವನ್ನಾಗಿ ಮಾಡುವ ಉದ್ದೇಶದಿಂದಲೇ ಯುಎಇನಲ್ಲಿ ಏಶ್ಯಕಪ್ ಟೂರ್ನಿಯನ್ನು ಆಯೋಜಿಸಬೇಕೆಂಬ ತನ್ನ ಸಲಹೆಯನ್ನು ಏಶ್ಯನ್ ಕ್ರಿಕೆಟ್ ಕೌನ್ಸಿಲ್ ತಿರಸ್ಕರಿಸಿತ್ತು ಎಂದು ಆರೋಪಿಸಿದರು.

ಶನಿವಾರ ಮಳೆಯಿಂದಾಗಿ ಕ್ರಿಕೆಟ್ನಲ್ಲಿ ಅತ್ಯುತ್ತಮ ಸ್ಪರ್ಧೆಯೊಂದನ್ನು ಕಳೆದುಕೊಳ್ಳುವಂತಾಯಿತು. ಪಿಸಿಬಿ ಅಧ್ಯಕ್ಷನಾಗಿದ್ದಾಗ ಯುಎಇನಲ್ಲಿ ಏಶ್ಯಕಪ್ ಆಡಬೇಕೆಂದು ಎಸಿಸಿಗೆ ಮನವಿ ಮಾಡಿದ್ದೆ. ಆದರೆ ಶ್ರೀಲಂಕಾಕ್ಕೆ ಅನುಕೂಲ ಮಾಡಿಕೊಡಲು ಕಳಪೆ ನಿರ್ಧಾರ ತಳೆಯಲಾಗಿದೆ ಎಂದರು.

ದುಬೈನಲ್ಲಿ ಟೂರ್ನಮೆಂಟ್ ಆಯೋಜಿಸದಿರಲು ಎಸಿಸಿ ನೀಡಿರುವ ಕಾರಣವನ್ನು ಟೀಕಿಸಿರುವ ಸೇಥಿ, ದುಬೈನಲ್ಲಿ ವಿಪರೀತ ಉಷ್ಣಾಂಶವಿದೆ ಎಂದು ಕಾರಣ ನೀಡಲಾಯಿತು. ಆದರೆ, 2022ರ ಸೆಪ್ಟಂಬರ್ನಲ್ಲಿ ಏಶ್ಯಕಪ್ ಆಡುವಾಗ ಹಾಗೂ 2014ರ ಎಪ್ರಿಲ್ನಲ್ಲಿ ಐಪಿಎಲ್ ಆಡುವಾಗ ದುಬೈನಲ್ಲಿ ಉಷ್ಣಾಂಶವಿರಲಿಲ್ಲವೇ? ಕ್ರೀಡೆಯ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಇದನ್ನು ಕ್ಷಮಿಸಲಾಗದು ಎಂದು ಹೇಳಿದರು.

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

4 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

4 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

4 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

5 hours ago