ಲಾಹೋರ್ : ಪಲ್ಲೆಕೆಲೆಯಲ್ಲಿ ಶನಿವಾರ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಏಶ್ಯಕಪ್ ಪಂದ್ಯವು ಮಳೆಯಿಂದಗಿ ರದ್ದಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಏಶ್ಯಕಪ್ನ ವೇಳಾಪಟ್ಟಿಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಏಶ್ಯನ್ ಕ್ರಿಕೆಟ್ ಕೌನ್ಸಿಲ್ನ ನಿರ್ಧಾರವನ್ನು ಟೀಕಿಸಿದ್ದಾರೆ.
ಶ್ರೀಲಂಕಾವನ್ನು ಸಹ ಆತಿಥ್ಯ ದೇಶವನ್ನಾಗಿ ಮಾಡುವ ಉದ್ದೇಶದಿಂದಲೇ ಯುಎಇನಲ್ಲಿ ಏಶ್ಯಕಪ್ ಟೂರ್ನಿಯನ್ನು ಆಯೋಜಿಸಬೇಕೆಂಬ ತನ್ನ ಸಲಹೆಯನ್ನು ಏಶ್ಯನ್ ಕ್ರಿಕೆಟ್ ಕೌನ್ಸಿಲ್ ತಿರಸ್ಕರಿಸಿತ್ತು ಎಂದು ಆರೋಪಿಸಿದರು.
ಶನಿವಾರ ಮಳೆಯಿಂದಾಗಿ ಕ್ರಿಕೆಟ್ನಲ್ಲಿ ಅತ್ಯುತ್ತಮ ಸ್ಪರ್ಧೆಯೊಂದನ್ನು ಕಳೆದುಕೊಳ್ಳುವಂತಾಯಿತು. ಪಿಸಿಬಿ ಅಧ್ಯಕ್ಷನಾಗಿದ್ದಾಗ ಯುಎಇನಲ್ಲಿ ಏಶ್ಯಕಪ್ ಆಡಬೇಕೆಂದು ಎಸಿಸಿಗೆ ಮನವಿ ಮಾಡಿದ್ದೆ. ಆದರೆ ಶ್ರೀಲಂಕಾಕ್ಕೆ ಅನುಕೂಲ ಮಾಡಿಕೊಡಲು ಕಳಪೆ ನಿರ್ಧಾರ ತಳೆಯಲಾಗಿದೆ ಎಂದರು.
ದುಬೈನಲ್ಲಿ ಟೂರ್ನಮೆಂಟ್ ಆಯೋಜಿಸದಿರಲು ಎಸಿಸಿ ನೀಡಿರುವ ಕಾರಣವನ್ನು ಟೀಕಿಸಿರುವ ಸೇಥಿ, ದುಬೈನಲ್ಲಿ ವಿಪರೀತ ಉಷ್ಣಾಂಶವಿದೆ ಎಂದು ಕಾರಣ ನೀಡಲಾಯಿತು. ಆದರೆ, 2022ರ ಸೆಪ್ಟಂಬರ್ನಲ್ಲಿ ಏಶ್ಯಕಪ್ ಆಡುವಾಗ ಹಾಗೂ 2014ರ ಎಪ್ರಿಲ್ನಲ್ಲಿ ಐಪಿಎಲ್ ಆಡುವಾಗ ದುಬೈನಲ್ಲಿ ಉಷ್ಣಾಂಶವಿರಲಿಲ್ಲವೇ? ಕ್ರೀಡೆಯ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಇದನ್ನು ಕ್ಷಮಿಸಲಾಗದು ಎಂದು ಹೇಳಿದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…