ಲಾಹೋರ್ : ಪಲ್ಲೆಕೆಲೆಯಲ್ಲಿ ಶನಿವಾರ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಏಶ್ಯಕಪ್ ಪಂದ್ಯವು ಮಳೆಯಿಂದಗಿ ರದ್ದಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಏಶ್ಯಕಪ್ನ ವೇಳಾಪಟ್ಟಿಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಏಶ್ಯನ್ ಕ್ರಿಕೆಟ್ ಕೌನ್ಸಿಲ್ನ ನಿರ್ಧಾರವನ್ನು ಟೀಕಿಸಿದ್ದಾರೆ.
ಶ್ರೀಲಂಕಾವನ್ನು ಸಹ ಆತಿಥ್ಯ ದೇಶವನ್ನಾಗಿ ಮಾಡುವ ಉದ್ದೇಶದಿಂದಲೇ ಯುಎಇನಲ್ಲಿ ಏಶ್ಯಕಪ್ ಟೂರ್ನಿಯನ್ನು ಆಯೋಜಿಸಬೇಕೆಂಬ ತನ್ನ ಸಲಹೆಯನ್ನು ಏಶ್ಯನ್ ಕ್ರಿಕೆಟ್ ಕೌನ್ಸಿಲ್ ತಿರಸ್ಕರಿಸಿತ್ತು ಎಂದು ಆರೋಪಿಸಿದರು.
ಶನಿವಾರ ಮಳೆಯಿಂದಾಗಿ ಕ್ರಿಕೆಟ್ನಲ್ಲಿ ಅತ್ಯುತ್ತಮ ಸ್ಪರ್ಧೆಯೊಂದನ್ನು ಕಳೆದುಕೊಳ್ಳುವಂತಾಯಿತು. ಪಿಸಿಬಿ ಅಧ್ಯಕ್ಷನಾಗಿದ್ದಾಗ ಯುಎಇನಲ್ಲಿ ಏಶ್ಯಕಪ್ ಆಡಬೇಕೆಂದು ಎಸಿಸಿಗೆ ಮನವಿ ಮಾಡಿದ್ದೆ. ಆದರೆ ಶ್ರೀಲಂಕಾಕ್ಕೆ ಅನುಕೂಲ ಮಾಡಿಕೊಡಲು ಕಳಪೆ ನಿರ್ಧಾರ ತಳೆಯಲಾಗಿದೆ ಎಂದರು.
ದುಬೈನಲ್ಲಿ ಟೂರ್ನಮೆಂಟ್ ಆಯೋಜಿಸದಿರಲು ಎಸಿಸಿ ನೀಡಿರುವ ಕಾರಣವನ್ನು ಟೀಕಿಸಿರುವ ಸೇಥಿ, ದುಬೈನಲ್ಲಿ ವಿಪರೀತ ಉಷ್ಣಾಂಶವಿದೆ ಎಂದು ಕಾರಣ ನೀಡಲಾಯಿತು. ಆದರೆ, 2022ರ ಸೆಪ್ಟಂಬರ್ನಲ್ಲಿ ಏಶ್ಯಕಪ್ ಆಡುವಾಗ ಹಾಗೂ 2014ರ ಎಪ್ರಿಲ್ನಲ್ಲಿ ಐಪಿಎಲ್ ಆಡುವಾಗ ದುಬೈನಲ್ಲಿ ಉಷ್ಣಾಂಶವಿರಲಿಲ್ಲವೇ? ಕ್ರೀಡೆಯ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಇದನ್ನು ಕ್ಷಮಿಸಲಾಗದು ಎಂದು ಹೇಳಿದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…