ಕ್ರೀಡೆ

ಇಂಡೋ-ಪಾಕ್‌ ಪಂದ್ಯ ರದ್ದು: ಏಶ್ಯನ್ ಕ್ರಿಕೆಟ್ ಕೌನ್ಸಿಲ್ ವಿರುದ್ಧ ಪಿಸಿಬಿ ಮಾಜಿ ಅಧ್ಯಕ್ಷ ಸೇಥಿ ವಾಗ್ದಾಳಿ

ಲಾಹೋರ್ : ಪಲ್ಲೆಕೆಲೆಯಲ್ಲಿ ಶನಿವಾರ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಏಶ್ಯಕಪ್ ಪಂದ್ಯವು ಮಳೆಯಿಂದಗಿ ರದ್ದಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಏಶ್ಯಕಪ್ನ ವೇಳಾಪಟ್ಟಿಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಏಶ್ಯನ್ ಕ್ರಿಕೆಟ್ ಕೌನ್ಸಿಲ್ನ ನಿರ್ಧಾರವನ್ನು ಟೀಕಿಸಿದ್ದಾರೆ.

ಶ್ರೀಲಂಕಾವನ್ನು ಸಹ ಆತಿಥ್ಯ ದೇಶವನ್ನಾಗಿ ಮಾಡುವ ಉದ್ದೇಶದಿಂದಲೇ ಯುಎಇನಲ್ಲಿ ಏಶ್ಯಕಪ್ ಟೂರ್ನಿಯನ್ನು ಆಯೋಜಿಸಬೇಕೆಂಬ ತನ್ನ ಸಲಹೆಯನ್ನು ಏಶ್ಯನ್ ಕ್ರಿಕೆಟ್ ಕೌನ್ಸಿಲ್ ತಿರಸ್ಕರಿಸಿತ್ತು ಎಂದು ಆರೋಪಿಸಿದರು.

ಶನಿವಾರ ಮಳೆಯಿಂದಾಗಿ ಕ್ರಿಕೆಟ್ನಲ್ಲಿ ಅತ್ಯುತ್ತಮ ಸ್ಪರ್ಧೆಯೊಂದನ್ನು ಕಳೆದುಕೊಳ್ಳುವಂತಾಯಿತು. ಪಿಸಿಬಿ ಅಧ್ಯಕ್ಷನಾಗಿದ್ದಾಗ ಯುಎಇನಲ್ಲಿ ಏಶ್ಯಕಪ್ ಆಡಬೇಕೆಂದು ಎಸಿಸಿಗೆ ಮನವಿ ಮಾಡಿದ್ದೆ. ಆದರೆ ಶ್ರೀಲಂಕಾಕ್ಕೆ ಅನುಕೂಲ ಮಾಡಿಕೊಡಲು ಕಳಪೆ ನಿರ್ಧಾರ ತಳೆಯಲಾಗಿದೆ ಎಂದರು.

ದುಬೈನಲ್ಲಿ ಟೂರ್ನಮೆಂಟ್ ಆಯೋಜಿಸದಿರಲು ಎಸಿಸಿ ನೀಡಿರುವ ಕಾರಣವನ್ನು ಟೀಕಿಸಿರುವ ಸೇಥಿ, ದುಬೈನಲ್ಲಿ ವಿಪರೀತ ಉಷ್ಣಾಂಶವಿದೆ ಎಂದು ಕಾರಣ ನೀಡಲಾಯಿತು. ಆದರೆ, 2022ರ ಸೆಪ್ಟಂಬರ್ನಲ್ಲಿ ಏಶ್ಯಕಪ್ ಆಡುವಾಗ ಹಾಗೂ 2014ರ ಎಪ್ರಿಲ್ನಲ್ಲಿ ಐಪಿಎಲ್ ಆಡುವಾಗ ದುಬೈನಲ್ಲಿ ಉಷ್ಣಾಂಶವಿರಲಿಲ್ಲವೇ? ಕ್ರೀಡೆಯ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಇದನ್ನು ಕ್ಷಮಿಸಲಾಗದು ಎಂದು ಹೇಳಿದರು.

andolanait

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

52 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

1 hour ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

22 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

22 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

23 hours ago