ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅಧಿಕಾರವಧಿ ಮುಗಿಯುತ್ತಾ ಬಂದಿದೆ. ಇದರ ಬೆನ್ನಲ್ಲೇ ದಾದಾ, ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದ್ದು, ಕರ್ನಾಟಕ ಮೂಲದ ರೋಜರ್ ಬಿನ್ನಿ, ಬಿಸಿಸಿಐ ಅಧ್ಯಕ್ಷರಾಗಿ ನೇಮಕವಾಗುವುದು ಬಹುತೇಕ ಖಚಿತ ಎನಿಸಿದೆ.
ಸೌರವ್ ಗಂಗೂಲಿ ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರೆಯಲು ಇಷ್ಟವಿತ್ತು, ಆದರೆ ಬಿಸಿಸಿಐನ ಇತರೆ ಸದಸ್ಯರಿಂದ ಅವರಿಗೆ ಸೂಕ್ತ ಬೆಂಬಲ ದೊರೆಯಲಿಲ್ಲ ಎನ್ನುವ ಬಗ್ಗೆಯೂ ವರದಿಗಳಾಗಿವೆ. ಇದೀಗ ಈ ವಿಚಾರದ ಕುರಿತಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೊದಲ ಬಾರಿಗೆ ತುಟಿಬಿಚ್ಚಿದ್ದು, ತಾವು ಬೇರೆಯ ವಿಚಾರಗಳತ್ತ ಗಮನಹರಿಸುವುದಾಗಿ ತಿಳಿಸಿದ್ದಾರೆ.
ಬಂಧನ್ ಬ್ಯಾಂಕ್ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸೌರವ್ ಗಂಗೂಲಿ, ಮಾಧ್ಯಮದವರ ಪ್ರಶ್ನೆಗೆ, ತಾವು ಸಾಕಷ್ಟು ವರ್ಷಗಳಿಂದ ಕ್ರಿಕೆಟ್ ಆಡಳಿತದಲ್ಲಿ ಭಾಗಿಯಾಗಿದ್ದು, ಈಗ ಬೇರೆ ವಿಚಾರಗಳ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ. ಭಾರತ ಪರ ಆಡಿದ್ದು ನನ್ನ ಪಾಲಿನ ಅತ್ಯುತ್ತಮ ದಿನಗಳು. ನಾನು ಬಿಸಿಸಿಐ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ನಾನು ಅದಕ್ಕಿಂತ ದೊಡ್ಡ ಕೆಲಸ ಮಾಡಬೇಕೆಂದಿದ್ದೇನೆ. ನೀವು ಎಂದೆಂದಿಗೂ ಆಟಗಾರನಾಗಿರಲು ಸಾಧ್ಯವಿಲ್ಲ, ಅದೇ ರೀತಿ ಶಾಶ್ವತವಾಗಿ ಆಡಳಿತಾಧಿಕಾರಿಯಾಗಿರಲು ಸಾಧ್ಯವಿಲ್ಲ. ಈ ಎರಡು ಕಾರ್ಯ ನಿರ್ವಹಿಸಿದ್ದು ಒಳ್ಳೆಯ ಅನುಭವ ಎಂದು ದಾದಾ ಹೇಳಿದ್ದಾರೆ.
ಇನ್ನು ಇದೇ ವೇಳೆ ಟೀಂ ಇಂಡಿಯಾ ನಾಯಕರಾಗಿದ್ದಾಗಿನ ತಮ್ಮ ಅನುಭವದ ಬಗ್ಗೆಯೂ ಸೌರವ್ ಗಂಗೂಲಿ ಮುಕ್ತವಾಗಿ ಮಾತನಾಡಿದ್ದಾರೆ. ಆರು ನಾಯಕರು ತಂಡವನ್ನು ಮುನ್ನಡೆಸಿದ್ದರು. ಏಕದಿನ ತಂಡದಿಂದ ರಾಹುಲ್ ದ್ರಾವಿಡ್ ಬಹುತೇಕ ಹೊರಬಿದ್ದರು ಎನ್ನುವ ಸಂದರ್ಭದಲ್ಲಿ ನಾನು ದ್ರಾವಿಡ್ ಬೆನ್ನಿಗೆ ನಿಂತಿದ್ದೆ. ನಾನು ಅವರ ಸಲಹೆಯನ್ನು ತೆಗೆದುಕೊಂಡು ತಂಡವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೆ. ಆದರೆ ತಂಡದ ವಾತಾವರಣದಲ್ಲಿ ಇದೆಲ್ಲ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
ನಾನು ರನ್ ಬಾರಿಸಿದ್ದನ್ನಷ್ಟೇ ಮುಖ್ಯವಲ್ಲ, ಜನರು ಅದಕ್ಕಿಂತ ಬೇರೆಯಾದುದ್ದನ್ನು ಜನರು ಗಮನಿಸಿದ್ದಾರೆ. ನಾಯಕನಾದವರು ಈ ರೀತಿ ತಂಡವನ್ನು ಮುನ್ನಡೆಸುತ್ತಾರೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ, ಮಂಗಳವಾರವಷ್ಟೇ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಹುತೇಕ ರೋಜರ್ ಬಿನ್ನಿ ಅವಿರೋಧವಾಗಿ ಬಿಸಿಸಿಐ ನೂತನ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿವೆ. ಇನ್ನು ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಮ್ಮ ನಾಮಪತ್ರವನ್ನು ಸಲ್ಲಿಸಿದ್ದು, ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಕವಾಗುವುದು ಬಹುತೇಕ ಖಚಿತ ಎನಿಸಿದೆ. ಒಂದು ವೇಳೆ ಬೇರೆ ಯಾವ ಅಭ್ಯರ್ಥಿಯು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸದೇ ಹೋದರೆ, ಜಯ್ ಶಾ ಕೂಡಾ ಅವಿರೋಧವಾಗಿ ಬಿಸಿಸಿಐ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ಆಯ್ಕೆಯಾಗುವ ಸಾಧ್ಯತೆಯಿದೆ.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…