ಕ್ರೀಡೆ

ಎಂದೆಂದಿಗೂ ಆಟಗಾರನಾಗಿರಲು, ಆಡಳಿತಾಧಿಕಾರಿಯಾಗಿರಲು ಸಾಧ್ಯವಿಲ್ಲ : ಗಂಗೂಲಿ

ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅಧಿಕಾರವಧಿ ಮುಗಿಯುತ್ತಾ ಬಂದಿದೆ. ಇದರ ಬೆನ್ನಲ್ಲೇ ದಾದಾ, ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದ್ದು, ಕರ್ನಾಟಕ ಮೂಲದ ರೋಜರ್ ಬಿನ್ನಿ, ಬಿಸಿಸಿಐ ಅಧ್ಯಕ್ಷರಾಗಿ ನೇಮಕವಾಗುವುದು ಬಹುತೇಕ ಖಚಿತ ಎನಿಸಿದೆ.

ಸೌರವ್ ಗಂಗೂಲಿ ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರೆಯಲು ಇಷ್ಟವಿತ್ತು, ಆದರೆ ಬಿಸಿಸಿಐನ ಇತರೆ ಸದಸ್ಯರಿಂದ ಅವರಿಗೆ ಸೂಕ್ತ ಬೆಂಬಲ ದೊರೆಯಲಿಲ್ಲ ಎನ್ನುವ ಬಗ್ಗೆಯೂ ವರದಿಗಳಾಗಿವೆ. ಇದೀಗ ಈ ವಿಚಾರದ ಕುರಿತಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೊದಲ ಬಾರಿಗೆ ತುಟಿಬಿಚ್ಚಿದ್ದು, ತಾವು ಬೇರೆಯ ವಿಚಾರಗಳತ್ತ ಗಮನಹರಿಸುವುದಾಗಿ ತಿಳಿಸಿದ್ದಾರೆ.

ಬಂಧನ್ ಬ್ಯಾಂಕ್‌ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸೌರವ್ ಗಂಗೂಲಿ, ಮಾಧ್ಯಮದವರ ಪ್ರಶ್ನೆಗೆ, ತಾವು ಸಾಕಷ್ಟು ವರ್ಷಗಳಿಂದ ಕ್ರಿಕೆಟ್‌ ಆಡಳಿತದಲ್ಲಿ ಭಾಗಿಯಾಗಿದ್ದು, ಈಗ ಬೇರೆ ವಿಚಾರಗಳ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ. ಭಾರತ ಪರ ಆಡಿದ್ದು ನನ್ನ ಪಾಲಿನ ಅತ್ಯುತ್ತಮ ದಿನಗಳು. ನಾನು ಬಿಸಿಸಿಐ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ನಾನು ಅದಕ್ಕಿಂತ ದೊಡ್ಡ ಕೆಲಸ ಮಾಡಬೇಕೆಂದಿದ್ದೇನೆ. ನೀವು ಎಂದೆಂದಿಗೂ ಆಟಗಾರನಾಗಿರಲು ಸಾಧ್ಯವಿಲ್ಲ, ಅದೇ ರೀತಿ ಶಾಶ್ವತವಾಗಿ ಆಡಳಿತಾಧಿಕಾರಿಯಾಗಿರಲು ಸಾಧ್ಯವಿಲ್ಲ. ಈ ಎರಡು ಕಾರ್ಯ ನಿರ್ವಹಿಸಿದ್ದು ಒಳ್ಳೆಯ ಅನುಭವ ಎಂದು ದಾದಾ ಹೇಳಿದ್ದಾರೆ.

ಇನ್ನು ಇದೇ ವೇಳೆ ಟೀಂ ಇಂಡಿಯಾ ನಾಯಕರಾಗಿದ್ದಾಗಿನ ತಮ್ಮ ಅನುಭವದ ಬಗ್ಗೆಯೂ ಸೌರವ್ ಗಂಗೂಲಿ ಮುಕ್ತವಾಗಿ ಮಾತನಾಡಿದ್ದಾರೆ. ಆರು ನಾಯಕರು ತಂಡವನ್ನು ಮುನ್ನಡೆಸಿದ್ದರು. ಏಕದಿನ ತಂಡದಿಂದ ರಾಹುಲ್ ದ್ರಾವಿಡ್ ಬಹುತೇಕ ಹೊರಬಿದ್ದರು ಎನ್ನುವ ಸಂದರ್ಭದಲ್ಲಿ ನಾನು ದ್ರಾವಿಡ್ ಬೆನ್ನಿಗೆ ನಿಂತಿದ್ದೆ. ನಾನು ಅವರ ಸಲಹೆಯನ್ನು ತೆಗೆದುಕೊಂಡು ತಂಡವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೆ. ಆದರೆ ತಂಡದ ವಾತಾವರಣದಲ್ಲಿ ಇದೆಲ್ಲ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು ರನ್‌ ಬಾರಿಸಿದ್ದನ್ನಷ್ಟೇ ಮುಖ್ಯವಲ್ಲ, ಜನರು ಅದಕ್ಕಿಂತ ಬೇರೆಯಾದುದ್ದನ್ನು ಜನರು ಗಮನಿಸಿದ್ದಾರೆ. ನಾಯಕನಾದವರು ಈ ರೀತಿ ತಂಡವನ್ನು ಮುನ್ನಡೆಸುತ್ತಾರೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ, ಮಂಗಳವಾರವಷ್ಟೇ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಹುತೇಕ ರೋಜರ್ ಬಿನ್ನಿ ಅವಿರೋಧವಾಗಿ ಬಿಸಿಸಿಐ ನೂತನ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿವೆ.  ಇನ್ನು ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಮ್ಮ ನಾಮಪತ್ರವನ್ನು ಸಲ್ಲಿಸಿದ್ದು, ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಕವಾಗುವುದು ಬಹುತೇಕ ಖಚಿತ ಎನಿಸಿದೆ. ಒಂದು ವೇಳೆ ಬೇರೆ ಯಾವ ಅಭ್ಯರ್ಥಿಯು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸದೇ ಹೋದರೆ, ಜಯ್ ಶಾ ಕೂಡಾ ಅವಿರೋಧವಾಗಿ ಬಿಸಿಸಿಐ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ಆಯ್ಕೆಯಾಗುವ ಸಾಧ್ಯತೆಯಿದೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago