ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್ ಕೂಲ್ ಎಂದೇ ಖಾತಿ ಪಡೆದ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ, ಶುಕ್ರವಾರ (ಜುಲೈ 7) ತಮ್ಮ 42ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸಾಮಾನ್ಯವಾಗಿ ಕ್ರಿಕೆಟಿಗರ ವೃತ್ತಿಬದುಕು 36-38ರ ಒಳಗೆ ಅಂತ್ಯವಾಗಿಬಿಡುತ್ತದೆ. ಅದರಲ್ಲೂ ವಿಕೆಟ್ಕೀಪರ್ಗಳು 35ರ ಬಳಿಕ ಆಟ ಮುಂದುವರಿಸುವುದು ಬಹಳಾ ಕಷ್ಟ. ಆದರೆ, ಸ್ಪರ್ಧಾತ್ಮ ಕ್ರಿಕೆಟ್ನಲ್ಲಿ ಮುಂದುವರಿಯುವ ತುಡಿತ ಹೊಂದಿರುವ ಎಂಎಸ್ಡಿ ಇದೇ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 5ನೇ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದುಕೊಟ್ಟು, ನಿವೃತ್ತಿ ಸದ್ಯಕ್ಕಿಲ್ಲ ಎಂದೇ ಸಂದೇಶ ರವಾನಿಸಿದ್ದರು.
“ಉತ್ತರ ಹುಡುಕುತ್ತಿದ್ದೇನೆ? ಟ್ರೋಫಿ ಗೆದ್ದಾಗ ನಿವೃತ್ತಿ ಹೇಳಲು ಸೂಕ್ತ ಸಮಯವಾಗಿರುತ್ತದೆ. ಆದರೆ, ಎಲ್ಲೆಡೆ ನನಗೆ ಸಿಕ್ಕಿರುವ ಪ್ರೀತಿಗೆ ಪ್ರತಿಯಾಗಿ ಏನಾದರೂ ಕೊಡಬೇಕಲ್ಲವೆ. ಇಲ್ಲಿಂದ ಆಟ ನಿಲ್ಲಿಸಿ ಹೊರ ನಡೆಯುವುದು ಸುಲಭ. ಆದರೆ, ಕಠಿಣ ಹಾದಿ ಏನೆಂದರೆ ಮುಂದಿನ 9 ತಿಂಗಳು ಕಷ್ಟ ಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ಅಭಿಮಾನಿಗಳಿಗೆ ನಾನು ನೀಡಲಿರುವ ಉಡುಗೊರೆ, ನನ್ನ ದೇಹಕ್ಕೆ ಇದು ಕಷ್ಟವಾದರೂ ಖಂಡಿತಾ ಪ್ರಯತ್ನಿಸಲಿದ್ದೇನೆ,” ಎಂದು ಐಪಿಎಲ್ 2023 ಫೈನಲ್ ಬಳಿಕ ಧೋನಿ ಹೇಳಿದ್ದರು.
ಮಂಡಿ ನೋವಿನ ಗಾಯದ ಸಮಸ್ಯೆ ಎದುರಿಸಿರುವ ಎಂಎಸ್ ಧೋನಿ, ಸಂಪೂರ್ಣ ಚೇತರಿಕೆ ಕಂಡರೆ ಮಾತ್ರವೇ 17ನೇ ಆವೃತ್ತಿಯ ಐಪಿಎಲ್ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲವಾದರೆ ಸಿಎಸ್ಕೆ ಕೋಚಿಂಗ್ ಬಳಗ ಸೇರಿಕೊಳ್ಳಲಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…