ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್ ಕೂಲ್ ಎಂದೇ ಖಾತಿ ಪಡೆದ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ, ಶುಕ್ರವಾರ (ಜುಲೈ 7) ತಮ್ಮ 42ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸಾಮಾನ್ಯವಾಗಿ ಕ್ರಿಕೆಟಿಗರ ವೃತ್ತಿಬದುಕು 36-38ರ ಒಳಗೆ ಅಂತ್ಯವಾಗಿಬಿಡುತ್ತದೆ. ಅದರಲ್ಲೂ ವಿಕೆಟ್ಕೀಪರ್ಗಳು 35ರ ಬಳಿಕ ಆಟ ಮುಂದುವರಿಸುವುದು ಬಹಳಾ ಕಷ್ಟ. ಆದರೆ, ಸ್ಪರ್ಧಾತ್ಮ ಕ್ರಿಕೆಟ್ನಲ್ಲಿ ಮುಂದುವರಿಯುವ ತುಡಿತ ಹೊಂದಿರುವ ಎಂಎಸ್ಡಿ ಇದೇ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 5ನೇ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದುಕೊಟ್ಟು, ನಿವೃತ್ತಿ ಸದ್ಯಕ್ಕಿಲ್ಲ ಎಂದೇ ಸಂದೇಶ ರವಾನಿಸಿದ್ದರು.
“ಉತ್ತರ ಹುಡುಕುತ್ತಿದ್ದೇನೆ? ಟ್ರೋಫಿ ಗೆದ್ದಾಗ ನಿವೃತ್ತಿ ಹೇಳಲು ಸೂಕ್ತ ಸಮಯವಾಗಿರುತ್ತದೆ. ಆದರೆ, ಎಲ್ಲೆಡೆ ನನಗೆ ಸಿಕ್ಕಿರುವ ಪ್ರೀತಿಗೆ ಪ್ರತಿಯಾಗಿ ಏನಾದರೂ ಕೊಡಬೇಕಲ್ಲವೆ. ಇಲ್ಲಿಂದ ಆಟ ನಿಲ್ಲಿಸಿ ಹೊರ ನಡೆಯುವುದು ಸುಲಭ. ಆದರೆ, ಕಠಿಣ ಹಾದಿ ಏನೆಂದರೆ ಮುಂದಿನ 9 ತಿಂಗಳು ಕಷ್ಟ ಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ಅಭಿಮಾನಿಗಳಿಗೆ ನಾನು ನೀಡಲಿರುವ ಉಡುಗೊರೆ, ನನ್ನ ದೇಹಕ್ಕೆ ಇದು ಕಷ್ಟವಾದರೂ ಖಂಡಿತಾ ಪ್ರಯತ್ನಿಸಲಿದ್ದೇನೆ,” ಎಂದು ಐಪಿಎಲ್ 2023 ಫೈನಲ್ ಬಳಿಕ ಧೋನಿ ಹೇಳಿದ್ದರು.
ಮಂಡಿ ನೋವಿನ ಗಾಯದ ಸಮಸ್ಯೆ ಎದುರಿಸಿರುವ ಎಂಎಸ್ ಧೋನಿ, ಸಂಪೂರ್ಣ ಚೇತರಿಕೆ ಕಂಡರೆ ಮಾತ್ರವೇ 17ನೇ ಆವೃತ್ತಿಯ ಐಪಿಎಲ್ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲವಾದರೆ ಸಿಎಸ್ಕೆ ಕೋಚಿಂಗ್ ಬಳಗ ಸೇರಿಕೊಳ್ಳಲಿದ್ದಾರೆ.
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…