ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್ ಕೂಲ್ ಎಂದೇ ಖಾತಿ ಪಡೆದ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ, ಶುಕ್ರವಾರ (ಜುಲೈ 7) ತಮ್ಮ 42ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸಾಮಾನ್ಯವಾಗಿ ಕ್ರಿಕೆಟಿಗರ ವೃತ್ತಿಬದುಕು 36-38ರ ಒಳಗೆ ಅಂತ್ಯವಾಗಿಬಿಡುತ್ತದೆ. ಅದರಲ್ಲೂ ವಿಕೆಟ್ಕೀಪರ್ಗಳು 35ರ ಬಳಿಕ ಆಟ ಮುಂದುವರಿಸುವುದು ಬಹಳಾ ಕಷ್ಟ. ಆದರೆ, ಸ್ಪರ್ಧಾತ್ಮ ಕ್ರಿಕೆಟ್ನಲ್ಲಿ ಮುಂದುವರಿಯುವ ತುಡಿತ ಹೊಂದಿರುವ ಎಂಎಸ್ಡಿ ಇದೇ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 5ನೇ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದುಕೊಟ್ಟು, ನಿವೃತ್ತಿ ಸದ್ಯಕ್ಕಿಲ್ಲ ಎಂದೇ ಸಂದೇಶ ರವಾನಿಸಿದ್ದರು.
“ಉತ್ತರ ಹುಡುಕುತ್ತಿದ್ದೇನೆ? ಟ್ರೋಫಿ ಗೆದ್ದಾಗ ನಿವೃತ್ತಿ ಹೇಳಲು ಸೂಕ್ತ ಸಮಯವಾಗಿರುತ್ತದೆ. ಆದರೆ, ಎಲ್ಲೆಡೆ ನನಗೆ ಸಿಕ್ಕಿರುವ ಪ್ರೀತಿಗೆ ಪ್ರತಿಯಾಗಿ ಏನಾದರೂ ಕೊಡಬೇಕಲ್ಲವೆ. ಇಲ್ಲಿಂದ ಆಟ ನಿಲ್ಲಿಸಿ ಹೊರ ನಡೆಯುವುದು ಸುಲಭ. ಆದರೆ, ಕಠಿಣ ಹಾದಿ ಏನೆಂದರೆ ಮುಂದಿನ 9 ತಿಂಗಳು ಕಷ್ಟ ಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ಅಭಿಮಾನಿಗಳಿಗೆ ನಾನು ನೀಡಲಿರುವ ಉಡುಗೊರೆ, ನನ್ನ ದೇಹಕ್ಕೆ ಇದು ಕಷ್ಟವಾದರೂ ಖಂಡಿತಾ ಪ್ರಯತ್ನಿಸಲಿದ್ದೇನೆ,” ಎಂದು ಐಪಿಎಲ್ 2023 ಫೈನಲ್ ಬಳಿಕ ಧೋನಿ ಹೇಳಿದ್ದರು.
ಮಂಡಿ ನೋವಿನ ಗಾಯದ ಸಮಸ್ಯೆ ಎದುರಿಸಿರುವ ಎಂಎಸ್ ಧೋನಿ, ಸಂಪೂರ್ಣ ಚೇತರಿಕೆ ಕಂಡರೆ ಮಾತ್ರವೇ 17ನೇ ಆವೃತ್ತಿಯ ಐಪಿಎಲ್ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲವಾದರೆ ಸಿಎಸ್ಕೆ ಕೋಚಿಂಗ್ ಬಳಗ ಸೇರಿಕೊಳ್ಳಲಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…