ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಜುಲೈ 7ಕ್ಕೆ ವಿಶೇಷ ಸ್ಥಾನಮಾನವಿದೆ. ಏಕೆಂದರೆ ಅಂದು ಕ್ರಿಕೆಟ್ ಲೋಕದ ದಿಗ್ಗಜ ಆಟಗಾರನು ಹುಟ್ಟಿದ ದಿನ. ಕ್ಯಾಪ್ಟನ್ ಕೂಲ್ ಎಂದೇ ಖಾತಿ ಪಡೆದ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ, ಶುಕ್ರವಾರ (ಜುಲೈ 7) ತಮ್ಮ 42ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸಾಮಾನ್ಯವಾಗಿ ಕ್ರಿಕೆಟಿಗರ ವೃತ್ತಿಬದುಕು 36-38ರ ಒಳಗೆ ಅಂತ್ಯವಾಗಿಬಿಡುತ್ತದೆ. ಅದರಲ್ಲೂ ವಿಕೆಟ್ಕೀಪರ್ಗಳು 35ರ ಬಳಿಕ ಆಟ ಮುಂದುವರಿಸುವುದು ಬಹಳಾ ಕಷ್ಟ. ಆದರೆ, ಸ್ಪರ್ಧಾತ್ಮ ಕ್ರಿಕೆಟ್ನಲ್ಲಿ ಮುಂದುವರಿಯುವ ತುಡಿತ ಹೊಂದಿರುವ ಎಂಎಸ್ಡಿ ಇದೇ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 5ನೇ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದುಕೊಟ್ಟು, ನಿವೃತ್ತಿ ಸದ್ಯಕ್ಕಿಲ್ಲ ಎಂದೇ ಸಂದೇಶ ರವಾನಿಸಿದ್ದರು.
“ಉತ್ತರ ಹುಡುಕುತ್ತಿದ್ದೇನೆ? ಟ್ರೋಫಿ ಗೆದ್ದಾಗ ನಿವೃತ್ತಿ ಹೇಳಲು ಸೂಕ್ತ ಸಮಯವಾಗಿರುತ್ತದೆ. ಆದರೆ, ಎಲ್ಲೆಡೆ ನನಗೆ ಸಿಕ್ಕಿರುವ ಪ್ರೀತಿಗೆ ಪ್ರತಿಯಾಗಿ ಏನಾದರೂ ಕೊಡಬೇಕಲ್ಲವೆ. ಇಲ್ಲಿಂದ ಆಟ ನಿಲ್ಲಿಸಿ ಹೊರ ನಡೆಯುವುದು ಸುಲಭ. ಆದರೆ, ಕಠಿಣ ಹಾದಿ ಏನೆಂದರೆ ಮುಂದಿನ 9 ತಿಂಗಳು ಕಷ್ಟ ಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ಅಭಿಮಾನಿಗಳಿಗೆ ನಾನು ನೀಡಲಿರುವ ಉಡುಗೊರೆ, ನನ್ನ ದೇಹಕ್ಕೆ ಇದು ಕಷ್ಟವಾದರೂ ಖಂಡಿತಾ ಪ್ರಯತ್ನಿಸಲಿದ್ದೇನೆ,” ಎಂದು ಐಪಿಎಲ್ 2023 ಫೈನಲ್ ಬಳಿಕ ಧೋನಿ ಹೇಳಿದ್ದರು.
ಮಂಡಿ ನೋವಿನ ಗಾಯದ ಸಮಸ್ಯೆ ಎದುರಿಸಿರುವ ಎಂಎಸ್ ಧೋನಿ, ಸಂಪೂರ್ಣ ಚೇತರಿಕೆ ಕಂಡರೆ ಮಾತ್ರವೇ 17ನೇ ಆವೃತ್ತಿಯ ಐಪಿಎಲ್ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲವಾದರೆ ಸಿಎಸ್ಕೆ ಕೋಚಿಂಗ್ ಬಳಗ ಸೇರಿಕೊಳ್ಳಲಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…