ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾಗಿಯಾಗಿದ್ದ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಏರಿಕೆ ಕಾರಣದಿಂದ ಫೈನಲ್ಸ್ ನಲ್ಲಿ ಭಾಗವಹಿಸದೇ ಟೂರ್ನಿಯಿಂದ ಹೊರಬಿದ್ದಿದ್ದರು. 100 ಗ್ರಾಂ ತೂಕ ಹೆಚ್ಚಾಗಿ ಅವರನ್ನು ಪಂದ್ಯದಿಂದ ಹೊರ ಹಾಕಲಾಗಿತ್ತು. ಈ ಕುರಿತಂತೆ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು.
ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಬಳಿ ಫೈನಲ್ ಪಂದ್ಯವನ್ನು ತಡಮಾಡಲು ಸಾಧ್ಯವಿಲ್ಲ ಎಂದು ಸಿಎಎಸ್ ಹೇಳಿತ್ತು. ಈ ಸಂದರ್ಭದಲ್ಲಿ ಫೋಗಟ್ ಜಂಟಿ ಬೆಳ್ಳಿಗೆ ಬೇಡಿಕೆ ಇಟ್ಟಿದ್ದರು. ಆದರೆ ಇದೀಗಾ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಪದಕ ನೀಡುವ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ವಿನೇಶ್ ಫೋಗಟ್ ಅವರ ಅನರ್ಹದ ಅರ್ಜಿಯ ಕುರಿತು ಪ್ಯಾರಿಸ್ ಒಲಿಂಪಿಕ್ಸ್ ಮುಗಿಯುವುದರ ಒಳಗಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೆ ಬಿಡುಗಡೆಗೊಳಿಸಿದೆ.
ಇನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಲಯದಲ್ಲಿ ವಾದಿಸಲು ಭಾರತದ ಉನ್ನತ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದಷ್ಪತ್ ಸಂಘಾನಿಯಾ ಅವರನ್ನು ನೇಮಿಸಿದ್ದು, ವಿನೇಶ್ ಫೋಗಟ್ ಪರ ವಕಾಲತ್ತು ವಹಿಸಲಿದೆ. ಇನ್ನು ವಿನೇಶ್ ಫೋಗಟ್ ಅವರ ಪರವಾಗಿ ಭಾರತೀಯ ಒಲಿಂಪಿಕ್ ಅಸೋಶಿಯೇಷನ್ ನಿಂತಿದೆ ಎಂದು ಐಒಎ ಹೇಳಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…