ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾಗಿಯಾಗಿದ್ದ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಏರಿಕೆ ಕಾರಣದಿಂದ ಫೈನಲ್ಸ್ ನಲ್ಲಿ ಭಾಗವಹಿಸದೇ ಟೂರ್ನಿಯಿಂದ ಹೊರಬಿದ್ದಿದ್ದರು. 100 ಗ್ರಾಂ ತೂಕ ಹೆಚ್ಚಾಗಿ ಅವರನ್ನು ಪಂದ್ಯದಿಂದ ಹೊರ ಹಾಕಲಾಗಿತ್ತು. ಈ ಕುರಿತಂತೆ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು.
ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಬಳಿ ಫೈನಲ್ ಪಂದ್ಯವನ್ನು ತಡಮಾಡಲು ಸಾಧ್ಯವಿಲ್ಲ ಎಂದು ಸಿಎಎಸ್ ಹೇಳಿತ್ತು. ಈ ಸಂದರ್ಭದಲ್ಲಿ ಫೋಗಟ್ ಜಂಟಿ ಬೆಳ್ಳಿಗೆ ಬೇಡಿಕೆ ಇಟ್ಟಿದ್ದರು. ಆದರೆ ಇದೀಗಾ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಪದಕ ನೀಡುವ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ವಿನೇಶ್ ಫೋಗಟ್ ಅವರ ಅನರ್ಹದ ಅರ್ಜಿಯ ಕುರಿತು ಪ್ಯಾರಿಸ್ ಒಲಿಂಪಿಕ್ಸ್ ಮುಗಿಯುವುದರ ಒಳಗಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೆ ಬಿಡುಗಡೆಗೊಳಿಸಿದೆ.
ಇನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಲಯದಲ್ಲಿ ವಾದಿಸಲು ಭಾರತದ ಉನ್ನತ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದಷ್ಪತ್ ಸಂಘಾನಿಯಾ ಅವರನ್ನು ನೇಮಿಸಿದ್ದು, ವಿನೇಶ್ ಫೋಗಟ್ ಪರ ವಕಾಲತ್ತು ವಹಿಸಲಿದೆ. ಇನ್ನು ವಿನೇಶ್ ಫೋಗಟ್ ಅವರ ಪರವಾಗಿ ಭಾರತೀಯ ಒಲಿಂಪಿಕ್ ಅಸೋಶಿಯೇಷನ್ ನಿಂತಿದೆ ಎಂದು ಐಒಎ ಹೇಳಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…