ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾಗಿಯಾಗಿದ್ದ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಏರಿಕೆ ಕಾರಣದಿಂದ ಫೈನಲ್ಸ್ ನಲ್ಲಿ ಭಾಗವಹಿಸದೇ ಟೂರ್ನಿಯಿಂದ ಹೊರಬಿದ್ದಿದ್ದರು. 100 ಗ್ರಾಂ ತೂಕ ಹೆಚ್ಚಾಗಿ ಅವರನ್ನು ಪಂದ್ಯದಿಂದ ಹೊರ ಹಾಕಲಾಗಿತ್ತು. ಈ ಕುರಿತಂತೆ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು.
ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಬಳಿ ಫೈನಲ್ ಪಂದ್ಯವನ್ನು ತಡಮಾಡಲು ಸಾಧ್ಯವಿಲ್ಲ ಎಂದು ಸಿಎಎಸ್ ಹೇಳಿತ್ತು. ಈ ಸಂದರ್ಭದಲ್ಲಿ ಫೋಗಟ್ ಜಂಟಿ ಬೆಳ್ಳಿಗೆ ಬೇಡಿಕೆ ಇಟ್ಟಿದ್ದರು. ಆದರೆ ಇದೀಗಾ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಪದಕ ನೀಡುವ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ವಿನೇಶ್ ಫೋಗಟ್ ಅವರ ಅನರ್ಹದ ಅರ್ಜಿಯ ಕುರಿತು ಪ್ಯಾರಿಸ್ ಒಲಿಂಪಿಕ್ಸ್ ಮುಗಿಯುವುದರ ಒಳಗಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೆ ಬಿಡುಗಡೆಗೊಳಿಸಿದೆ.
ಇನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಲಯದಲ್ಲಿ ವಾದಿಸಲು ಭಾರತದ ಉನ್ನತ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದಷ್ಪತ್ ಸಂಘಾನಿಯಾ ಅವರನ್ನು ನೇಮಿಸಿದ್ದು, ವಿನೇಶ್ ಫೋಗಟ್ ಪರ ವಕಾಲತ್ತು ವಹಿಸಲಿದೆ. ಇನ್ನು ವಿನೇಶ್ ಫೋಗಟ್ ಅವರ ಪರವಾಗಿ ಭಾರತೀಯ ಒಲಿಂಪಿಕ್ ಅಸೋಶಿಯೇಷನ್ ನಿಂತಿದೆ ಎಂದು ಐಒಎ ಹೇಳಿದೆ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…