ಕ್ರೀಡೆ

ಪ್ರತಿಭಟನಾನಿರತ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರ ಸೂಕ್ಷ್ಮವಾಗಿ ನಿಭಾಯಿಸುತ್ತಿದೆ: ಕ್ರೀಡಾ ಸಚಿವ ಅನುರಾಗ್ ಠಾಕೂರ್

ಮುಂಬೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರವು ಸೂಕ್ಷ್ಮವಾಗಿ ನಿಭಾಯಿಸುತ್ತಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.

ಮುಂಬೈಗೆ ಭೇಟಿ ನೀಡಿರುವ ಠಾಕೂರ್ ಸುದ್ದಿಗಾರರೊಂದಿಗೆ ಮಾತನಾಡಿ, ಕುಸ್ತಿಪಟುಗಳ ಆರೋಪದ ಬಗ್ಗೆ ತನಿಖೆ ನಡೆಸಲು ಸಮಿತಿಯ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಂಗೀತಾ ಫೋಗಟ್ ಸೇರಿದಂತೆ ಹಲವಾರು ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಪದಕ ವಿಜೇತ ಕುಸ್ತಿಪಟುಗಳು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ನಿರ್ಗಮಿತ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಅಪ್ರಾಪ್ತೆ ಸೇರಿದಂತೆ ಹಲವಾರು ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಕುಸ್ತಿಪಟುಗಳು ಇತ್ತೀಚೆಗೆ ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಮುಳುಗಿಸುವುದಾಗಿ ಬೆದರಿಕೆ ಹಾಕಿದ್ದರು.

‘ಪ್ರತಿಭಟಿಸುವ ಕುಸ್ತಿಪಟುಗಳ ಸಮಸ್ಯೆಯನ್ನು ಸರ್ಕಾರ ಸೂಕ್ಷ್ಮವಾಗಿ ನಿಭಾಯಿಸುತ್ತಿದೆ. ಕುಸ್ತಿಪಟುಗಳು ಕೇಳಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕುಸ್ತಿ ಫೆಡರೇಶನ್ ತನ್ನ ಪದಾಧಿಕಾರಿಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ ಕಾರಣ ಆಡಳಿತಗಾರರ ಸಮಿತಿಯನ್ನು ರಚಿಸಲಾಗಿದೆ’ ಎಂದು ಠಾಕೂರ್ ಹೇಳಿದರು.

ಕುಸ್ತಿಪಟುಗಳು ಮ್ಯಾಜಿಸ್ಟೇಟ್ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.

ಬುಧವಾರ, ಠಾಕೂರ್ ಅವರು ಕ್ರೀಡೆಯನ್ನು ದುರ್ಬಲಗೊಳಿಸುವ ಅಥವಾ ಆಟಗಾರರನ್ನು ನೋಯಿಸುವ ಯಾವುದೇ ಕ್ರಮವನ್ನು ತೆಗೆದುಕೊಳ್ಳದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಮನವಿ ಮಾಡಿದರು ಮತ್ತು ಅವರ ಆರೋಪಗಳ ತನಿಖೆ ಪೂರ್ಣಗೊಂಡ ನಂತರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಕುಸ್ತಿಪಟುಗಳು ತಾಳ್ಮೆಯಿಂದಿರಬೇಕು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಂಬಿಕೆ ಇಡಬೇಕು ಎಂದು ಹೇಳಿದರು.

ಈ ವಿಚಾರವಾಗಿ ಹಲವು ರಾಜಕೀಯ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕುಸ್ತಿಪಟುಗಳನ್ನು ಭಾನುವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ನಡೆದ ದೌರ್ಜನ್ಯವನ್ನು ಖಂಡಿಸಿ ಬುಧವಾರ ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ತಮ್ಮ ಪದಕಗಳನ್ನು ಗಂಗಾನದಿಯಲ್ಲಿ ಎಸೆಯದಂತೆ ಏಕೆ ಮನವಿ ಮಾಡಿಲ್ಲ ಎಂದು ಪ್ರಶ್ನಿಸಿದೆ.

ಭಾರತೀಯ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ನಡೆಸಿಕೊಂಡ ರೀತಿ ‘ತುಂಬಾ ಆಂತಕಕಾರಿ’ಯಾಗಿದೆ ಮತ್ತು ಕುಸ್ತಿಪಟುಗಳು ಮಾಡಿರುವ ಆರೋಪಗಳ ಕುರಿತು ನಿಷ್ಪಕ್ಷಪಾತ, ಕ್ರಿಮಿನಲ್ ತನಿಖೆಯ ಮೂಲಕ ಬಗೆಹರಿಸಬೇಕು ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಹೇಳಿದೆ.

andolanait

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

33 mins ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

8 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago